ಬ್ರೇಕಿಂಗ್ ನ್ಯೂಸ್
02-04-21 08:09 pm Headline Karnataka News Network ಕರ್ನಾಟಕ
ಮೈಸೂರು, ಎ.2 : ಸರಕಾರದ ಇಲಾಖೆಯಲ್ಲಿ ರೂಲ್ಸ್ ಪ್ರೊಸೀಜರ್ ಮೀರಬಾರದೆಂಬುದು ನನ್ನ ಉದ್ದೇಶ. ಇದು ನನ್ನ ಮತ್ತು ಯಡಿಯೂರಪ್ಪ ನಡುವಿನ ವೈಯುಕ್ತಿಕ ವಿಚಾರವಲ್ಲ. ನನ್ನ ಇಲಾಖೆಗೆ ಹಣಕಾಸು ಇಲಾಖೆ ಹಣ ನೀಡುತ್ತೆ. ಆ ಹಣವನ್ನು ನಾನು, ನನ್ನ ಇಲಾಖೆ ಖರ್ಚು ಮಾಡಬೇಕು. ಇದು ನಮ್ಮ ಇಲಾಖೆಯ ಹಕ್ಕು. ಆದ್ರೆ ನನ್ನ ಗಮನಕ್ಕೆ ಬಾರದೇ ನೇರವಾಗಿ ಶಾಸಕರಿಗೆ ಹಂಚಿಕೆ ಮಾಡಿರುವುದು ನನ್ನ ಗಮನಕ್ಕೆ ಬಂತು. ಬೆಂಗಳೂರು ನಗರ ಜಿಪಂ ಒಂದಕ್ಕೆ 65 ಕೋಟಿ ಬಿಡುಗಡೆಯಾಗಿದೆ. ಒಟ್ಟು ರಾಜ್ಯದಲ್ಲಿ 1299 ಕೋಟಿ ರೂ. ಅನುದಾನವನ್ನು ಕಾನೂನು ಉಲ್ಲಂಘಿಸಿ ನೇರ ಹಂಚಿಕೆ ಮಾಡಿದ್ದಾರೆ. ಇದನ್ನು ಪ್ರಶ್ನಿಸಿ, ಹಿರಿಯರಿಗೆ ಪತ್ರ ಬರೆದಿದ್ದೇನೆ..

ಹೀಗೆಂದು ಸಿಎಂ ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿರುವ ಹಿರಿಯ ಸಚಿವ ಕೆ.ಎಸ್ ಈಶ್ವರಪ್ಪ ಸಮರ್ಥನೆ ಕೊಟ್ಟಿದ್ದಾರೆ.
ಈ ಬಗ್ಗೆ ನಾನು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ನಳಿನ್ ಕಟೀಲ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದಿದ್ದೇನೆ. ಪ್ರಧಾನಿ ಮೋದಿ, ಅಮಿತ್ ಶಾ ಎಲ್ಲರಿಗೂ ಪತ್ರ ಬರೆದಿದ್ದೇನೆ ಎಂದು ಹೇಳಿದ ಈಶ್ವರಪ್ಪ , ಆದೇಶ ಹೊರಡಿಸಿದ ಬಳಿಕ ಸಂಬಂಧಪಟ್ಟ ಸಚಿವರ ಗಮನಕ್ಕೆ ತನ್ನಿ ಎಂದು ಸಿಎಂ ಹೇಳಿರುವುದು ಎಷ್ಟು ಸರಿ. ನಾನು ಆರ್ಡಿಪಿಆರ್ ಪ್ರಿನ್ಸಿಪಲ್ ಕಾರ್ಯದರ್ಶಿ ಕೇಳಿದಾಗ, ಇಲ್ಲ ಸರ್, ಅನುದಾನ ತಡೆ ಹಿಡಿಯಲಾಗಿದೆ ಎಂದು ಹೇಳಿದ್ದಾರೆ. ಅರುಣ್ ಸಿಂಗ್, ಕಟೀಲ್, ಸಿ.ಟಿ.ರವಿ ಎಲ್ಲರೂ ತಡೆ ಹಿಡಿಯಿರಿ ಎಂದು ಹೇಳಿದ್ರು. ಸಿಎಂ ನೇರವಾಗಿ ನನ್ನ ಇಲಾಖೆಗೆ ಅನುದಾನ ನೀಡಿ ಹಂಚಿಕೆ ಮಾಡಬೇಕು. ಈ ರೂಲ್ಸ್ ಪ್ರೊಸೀಜರ್ ಪಾಲನೆ ಆಗಬೇಕೆಂಬುದು ನನ್ನ ಉದ್ದೇಶ ಎಂದು ಹೇಳಿದರು.

ಹಾಗೆಂದು ಮಾಧ್ಯಮಗಳು ನನ್ನ ಬಗ್ಗೆ ರೆಬಲ್ ಅಂತ ತೋರಿಸುವುದಲ್ಲ. ನನ್ನ ಜಾಯಮಾನದಲ್ಲಿ ರೆಬಲ್ ಆಗಲ್ಲ. ನಾನು ರೆಬಲ್ ಅಲ್ಲ, ನಾನು ಲಾಯಲ್. ನನ್ನ ಜೀವನದಲ್ಲಿ ಪಕ್ಷದ ವಿರುದ್ಧ ರೆಬಲ್ ಆಗಿಲ್ಲ ಎಂದು ಹೇಳಿದರು.
The controversy triggered in Karnataka by state minister K.S. Eshwarappa’s letter to the governor against B.S. Yediyurappa comes as the latest challenge for the besieged chief minister.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm