ಬ್ರೇಕಿಂಗ್ ನ್ಯೂಸ್
03-04-21 05:43 pm Headline Karnataka News Network ಕರ್ನಾಟಕ
ಬೆಂಗಳೂರು, ಎ.3: ಸಚಿವ ಈಶ್ವರಪ್ಪ – ಸಿಎಂ ಯಡಿಯೂರಪ್ಪ ನಡುವಿನ ಮುನಿಸಿಗೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಪಕ್ಷದಲ್ಲಿರುವ ಲಿಂಗಾಯತ ಮುಖಂಡರನ್ನು ಮುಗಿಸಿದ ರೀತಿ ಹಿಂದುಳಿದ ವರ್ಗದ ಮುಖಂಡರನ್ನೂ ಯಡಿಯೂರಪ್ಪ ಮುಗಿಸಲು ಸಂಚು ಹೂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಸಿಎಂ ಯಡಿಯೂರಪ್ಪ ವಿರುದ್ಧ ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ದೂರು ನೀಡಿರುವ ಕುರಿತು ಮೇಲಿನಂತೆ ಪ್ರತಿಕ್ರಿಯಿಸಿದರು.

ಈ ಹಿಂದೆ ಯಡಿಯೂರಪ್ಪನವರು ಲಿಂಗಾಯತ ನಾಯಕರನ್ನು ಯಶಸ್ವಿಯಾಗಿ ಮುಗಿಸಿದ್ದಾರೆ. ಇದೀಗ ಈಶ್ವರಪ್ಪರಂತಹ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ನೋಡುತ್ತಿದ್ದಾರೆ. ಯಡಿಯೂರಪ್ಪ ಜೊತೆಗೆ ಒಂದಷ್ಟು ಹೊಗಳು ಭಟರನ್ನು ಇಟ್ಟುಕೊಂಡಿದ್ದಾರೆ. ಅವರಷ್ಟೇ ಈಗ ಅವರ ಜೊತೆಗಿರುವ ಶಕ್ತಿ ಎಂದು ವ್ಯಂಗ್ಯವಾಗಿ ಟೀಕಿಸಿದ್ದಾರೆ.

ಯತ್ನಾಳ್ ಈ ರೀತಿಯ ಹೇಳಿಕೆ ನೀಡಿದ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್ ಘಟಕ ಟ್ವಿಟರ್ ನಲ್ಲಿ ಯಡಿಯೂರಪ್ಪ ವಿರುದ್ಧ ಅದೇ ಹೇಳಿಕೆಯನ್ನು ಮುಂದಿಟ್ಟು ಟೀಕೆ ಮಾಡಿದೆ. ಬಿಎಸ್ ವೈ ಅವರು ಲಿಂಗಾಯತ ನಾಯಕರನ್ನು ಮುಗಿಸಿದರು. ಇದೀಗ ಹಿಂದುಳಿದ ವರ್ಗದ ನಾಯಕರನ್ನು ಮುಗಿಸಲು ಕಾರ್ಯಕ್ರಮ ಹಾಕಿದ್ದಾರೆ. ಯತ್ನಾಳ್ ಹೇಳಿದಂತೆ, ಬಿಬಿ ಶಿವಪ್ಪರಿಂದ ಹಿಡಿದು ಈಗಿನ ವರೆಗೂ ಲಿಂಗಾಯತ ನಾಯಕರನ್ನು ಮುಗಿಸಿದ್ದು ನೀವೇ ಅಲ್ಲವೇ.. ನೀವು ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದು ಬಿಜೆಪಿ ಈ ಆರೋಪವ್ನು ಒಪ್ಪಿದಂತೆ ಎನ್ನುವ ಮೂಲಕ ಬಿಜೆಪಿ ನಾಯಕರ ಬುಡಕ್ಕೇ ತಂದಿಟ್ಟಿದೆ.
BJP MLA Basanagouda Patil Yatnal, a strident critic of Chief Minister BS Yediyurappa, has come out in support of RDPR Minister K S Eshwarappa in the letter episode.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm