ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.

ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
20-06-26 01:33 pm
HK News Staffer
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm