ಬ್ರೇಕಿಂಗ್ ನ್ಯೂಸ್
05-04-21 02:00 pm Headline Karnataka News Network ಕರ್ನಾಟಕ
ನವದೆಹಲಿ, ಎ.5: ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲಿ ಬೆಂಗಳೂರಿನ ವಿಶೇಷ ನ್ಯಾಯಾಲಯದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ ಹಾಕಿದೆ.

ಬೆಂಗಳೂರು ಉತ್ತರ ತಾಲೂಕಿನಲ್ಲಿ ಎಸ್ ಇಝೆಡ್ ಏರಿಯಾದಲ್ಲಿ 24 ಎಕ್ರೆ ಜಾಗವನ್ನು ಖಾಸಗಿಯವರಿಗೆ ಕಡಿಮೆ ದರಕ್ಕೆ ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು 2012ರಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ವಿಶೇಷ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಗೆ ವಿಧಿಸಿದ್ದ ತಡೆಯನ್ನು ಇತ್ತೀಚೆಗೆ ಹೈಕೋರ್ಟ್ ತೆರವು ಮಾಡಿತ್ತು. ಇದರಿಂದ ಯಡಿಯೂರಪ್ಪ ವಿರುದ್ಧ ಮತ್ತೆ ತೂಗುಗತ್ತಿ ಎದುರಾಗಿತ್ತು.

ಹೈಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಯಡಿಯೂರಪ್ಪ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿ, ಪ್ರಕರಣಕ್ಕೆ ತಡೆ ಕೇಳಿದ್ದಾರೆ. ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ವಿಧಿಸಿದ್ದು, ಸ್ವಲ್ಪಮಟ್ಟಿಗೆ ನಿರಾಳರಾಗಿದ್ದಾರೆ. 2006ರಲ್ಲಿ ಕೆಐಎಡಿಬಿಯವರು ಕೈಗಾರಿಕೆ ಉದ್ದೇಶಕ್ಕೆ ಖರೀದಿಸಿ, ಡಿನೋಟಿಫೈ ಮಾಡಿಸಿದ್ದ ಭೂಮಿಯನ್ನು ಯಡಿಯೂರಪ್ಪ ಸಿಎಂ ಆಗಿದ್ದಾಗ ಖಾಸಗಿ ವ್ಯಕ್ತಿಗಳಿಗೆ ಕಡಿಮೆ ದರಕ್ಕೆ ನೀಡುವಂತೆ ಮಾಡಿದ್ದರು. ಇದರಿಂದ ಸರಕಾರದ ಬೊಕ್ಕಸಕ್ಕೆ ಭಾರೀ ನಷ್ಟವಾಗಿತ್ತು. ಇದರಲ್ಲಿ ಯಡಿಯೂರಪ್ಪ ಅಧಿಕಾರ ದುರುಪಯೋಗಪಡಿಸಿ ಭ್ರಷ್ಟಾಚಾರ ಎಸಗಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು.
ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿಗಳು ಅಂದು ಸಿಎಂ ಆಗಿದ್ದ ಯಡಿಯೂರಪ್ಪ ವಿರುದ್ಧವೇ ಚಾರ್ಜ್ ಶೀಟ್ ಹಾಕಿ, ಸಿಎಂ ಸ್ಥಾನದಿಂದ ಇಳಿಯುವಂತೆ ಮಾಡಿದ್ದರು. ಪ್ರಕರಣ ಅಂದಿನ ಸನ್ನಿವೇಶದಲ್ಲಿ ದೇಶಾದ್ಯಂತ ಭಾರೀ ದೊಡ್ಡ ಸಂಚಲನ ಎಬ್ಬಿಸಿತ್ತು.
Karnataka Chief Minister BS Yediyurappa today caught a reprieve from the Supreme Court as a 10-year-old case against him involving land allegations has been put on hold.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm