ಬ್ರೇಕಿಂಗ್ ನ್ಯೂಸ್
07-04-21 04:35 pm Headline Karnataka News Network ಕರ್ನಾಟಕ
ಆನೇಕಲ್,ಎ.7; ಪೆಂಡಾಲ್ ಹಾಕುವ ಸಂದರ್ಭದಲ್ಲಿ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸಾವನ್ನಪ್ಪಿದ ಘಟನೆ ಇಂಡ್ಲಬೆಲೆಯಲ್ಲಿ ನಡೆದಿದೆ.
ಆನೇಕಲ್ ತಾಲೂಕಿನ ಅತ್ತಿಬೆಲೆ-ಸರ್ಜಾಪುರ ರಸ್ತೆಯ ಇಂಡ್ಲಬೆಲೆ ಬಳಿಯ ನೂತನ ಜಿಆರ್ ಸಂಸ್ಕೃತಿ ಕನ್ಸ್ಟ್ರಕ್ಷನ್ ಬಡಾವಣೆಯ ಉದ್ಘಾಟನಾ ಸಮಾಂರಂಭದ ಪೂರ್ವ ತಯಾರಿ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅತ್ತಿಬೆಲೆ ಉಷಾಕಿರಣ್ ಟೆಂಟ್ ಹೌಸ್ ಕಾರ್ಮಿಕರಾದ ಆಕಾಶ್ (30), ಹನೂರು ಮೂಲದ ಮಹದೇಶ್ (35), ಟಿ.ನರಸಿಪುರದ ವಿಷಕಂಠ (35) ಮತ್ತು ಜಾರ್ಖಂಡ್ ಮೂಲದ ವಿಜಯಸಿಂಗ್ (30) ಸಾವನ್ನಪ್ಪಿದವರು.
ನೂತನವಾಗಿ ನಿರ್ಮಿಸಲಾಗಿರುವ ಜಿಆರ್ ಸಂಸ್ಕೃತಿ ಅಪಾರ್ಟ್ಮೆಂಟ್ ಉದ್ಘಾಟನಾ ಸಮಾರಂಭ ನಾಳೆಯಿದ್ದು, ಇದಕ್ಕೆ ಸಂಬಂಧಿಸಿದಂತೆ ಶಾಮಿಯಾನ-ಪೆಂಡಾಲ್ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದರು.

ಪೆಂಡಾಲ್ನ ಕಬ್ಬಿಣದ ಸರಳುಗಳಲ್ಲಿ ಜೋತು ಬಿದ್ದಿದ್ದ 11 ಕೆ.ವಿ. ವಿದ್ಯುತ್ ತಂತಿ ಸ್ಪರ್ಶಿಸಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ನಾಲ್ವರು ಗಂಭೀರ ಗಾಯಗಳಿಂದ ನರಳುತ್ತಿದ್ದಾರೆ. ಕೂಡಲೇ ಯಡವನಹಳ್ಳಿ ಆಸ್ಪತ್ರೆಗೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಸ್ಥಳಕ್ಕೆ ಎಎಸ್ಪಿ ಲಕ್ಷ್ಮಿಗಣೇಶ್, ಸಿಐಕೆ ವಿಶ್ವನಾಥ್ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Bengaluru Four dead on spot after electrocution in Anekal.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm