ಬ್ರೇಕಿಂಗ್ ನ್ಯೂಸ್
08-04-21 08:11 pm Headline Karnataka News Network ಕರ್ನಾಟಕ
ಮೂಲ್ಕಿ, ಎ.8: ರೌಡಿ ಶೀಟರ್ ಆರೋಪಿಗೆ ವಿಚಾರಣೆಗೆ ಬರುವಂತೆ ನೋಟೀಸ್ ನೀಡಲು ತೆರಳಿದ್ದ ಎಎಸ್ಐ ಮೇಲೆ ತಲವಾರು ಬೀಸಿ ಹಲ್ಲೆ ನಡೆಸಿದ ಘಟನೆ ಕಿನ್ನಿಗೋಳಿ ಬಳಿಯ ಲಿಂಗಪ್ಪಯ್ಯಕಾಡಿನಲ್ಲಿ ನಡೆದಿದೆ.

ಪ್ರಕರಣ ಸಂಬಂಧಿಸಿ ರೌಡಿಶೀಟರ್ ಆಗಿರುವ ಲಿಂಗಪ್ಪಯ್ಯ ಕಾಡು ನಿವಾಸಿ ಅನ್ಸಾರ್ ನನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ. ಅನ್ಸಾರ್ ಮತ್ತು ಆತನ ತಂದೆ ಸಾದಿಕ್ ನವೆಂಬರ್ ನಲ್ಲಿ ಮೂಕ ವ್ಯಕ್ತಿಯೊಬ್ಬನಿಗೆ ಹಲ್ಲೆಗೈದ ಪ್ರಕರಣದಲ್ಲಿ ಆರೋಪಿಯಾಗಿದ್ದು ಈ ಬಗ್ಗೆ ವಿಚಾರಣೆಗೆ ಬರುವಂತೆ ಪೊಲೀಸರು ಕರೆದಿದ್ದರೂ, ಠಾಣೆಗೆ ಬಂದಿರಲಿಲ್ಲ. ಈ ಬಗ್ಗೆ 41 ಸಿಆರ್ ಪಿಸಿ ಪ್ರಕಾರ, ಆರೋಪಿಗೆ ಸ್ಟೇಶನ್ ನೋಟೀಸ್ ನೀಡಿ, ವಿಚಾರಣೆಗೆ ಕರೆಯಲೆಂದು ಮೂಲ್ಕಿ ಎಎಸ್ಐ ಅಶೋಕ್ ಮತ್ತು ಸಿಬಂದಿ ಸುರೇಶ್ ಲಿಂಗಪ್ಪಯ್ಯ ಕಾಡಿಗೆ ತೆರಳಿದ್ದರು. ಪೊಲೀಸರು ಬಂದಿದ್ದನ್ನು ನೋಡುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದು, ತನ್ನ ಮನೆಗೆ ತೆರಳಿ ಅವಿತುಕೊಂಡಿದ್ದ.
![]()
ಪೊಲೀಸ್ ಸಿಬಂದಿ ಅಲ್ಲಿಗೆ ತೆರಳಿದಾಗ, ಮನೆಗೆ ಬಾಗಿಲು ಹಾಕಿ ಒಳಗೆ ಕುಳಿತಿದ್ದನ್ನು ತಿಳಿದು ಹೆಚ್ಚುವರಿ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿತ್ತು. ಬಳಿಕ ಪೊಲೀಸರು ಬಾಗಿಲು ದೂಡಿ, ಒಳಕ್ಕೆ ಹೋಗುತ್ತಿದ್ದಂತೆ ಒಳಭಾಗದಲ್ಲಿದ್ದ ಅನ್ಸಾರ್ ತಲವಾರು ಬೀಸಿದ್ದಾನೆ. ಈ ವೇಳೆ, ಅಶೋಕ್ ಮತ್ತು ಸತೀಶ್ ಎಂಬ ಇನ್ನೊಬ್ಬ ಸಿಬಂದಿಯ ಕೈಗೆ ಗಾಯವಾಗಿದೆ. ಕೂಡಲೇ ಪೊಲೀಸರು ಅನ್ಸಾರ್ ನನ್ನು ಹಿಡಿದು ಬಂಧಿಸಿದ್ದಾರೆ. ಸ್ಥಳದಲ್ಲಿ ಜನರು ಜಮಾಯಿಸಿದ್ದರಿಂದ ಪೊಲೀಸರು ಬಳಿಕ ಅಲ್ಲಿಂದ ತೆರಳಿದ್ದರು. ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಎಎಸ್ಐ ಅಶೋಕ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಇಂದು ಬಿಡುಗಡೆಯಾಗಿದ್ದಾರೆ.

ರೌಡಿ ಅನ್ಸಾರ್ ಮತ್ತು ಆತನಿಗೆ ಸಹಕರಿಸಿದ ಆರೋಪದಲ್ಲಿ ತಂದೆ ಸಾದಿಕ್, ತಾಯಿ ಜುಬೈದಾ, ಇನ್ನೊಬ್ಬ ಮಹಿಳೆ ಮಮ್ತಾಜ್ ವಿರುದ್ಧ ಎಎಸ್ಐ ಅಶೋಕ್ ದೂರಿನಂತೆ ಮೂಲ್ಕಿ ಠಾಣೆಯಲ್ಲಿ ಕೊಲೆಯತ್ನ ಮತ್ತು ಕರ್ತವ್ಯಕ್ಕೆ ಅಡ್ಡಿ ಸಂಬಂಧಿಸಿ ಪ್ರಕರಣ ದಾಖಲಾಗಿದೆ. ಅನ್ಸಾರ್ ಮೂಲ್ಕಿ ಠಾಣೆ ವ್ಯಾಪ್ತಿಯಲ್ಲಿ ರೌಡಿಯಾಗಿದ್ದು, ಕಳೆದ ಅಕ್ಟೋಬರ್ ನಲ್ಲಿ ಲಿಂಗಪ್ಪಯ್ಯ ಕಾಡಿನಲ್ಲಿ ಮನೆಯೊಂದಕ್ಕೆ ನುಗ್ಗಿ ದರೋಡೆಗೆ ಯತ್ನ ನಡೆಸಿದ ಬಗ್ಗೆ ದೂರು ದಾಖಲಾಗಿತ್ತು. ಆನಂತರ ನವೆಂಬರ್ ನಲ್ಲಿ ತಂದೆ ಮಗ ಸೇರಿ ಒಬ್ಬ ಬಡಪಾಯಿಗೆ ಹಲ್ಲೆಗೈದಿದ್ದ ಬಗ್ಗೆ ದೂರು ದಾಖಲಾಗಿತ್ತು. ಐಕಳದಲ್ಲಿ ನಡೆದ ಮಹಿಳೆಯ ಕೊಲೆ ಪ್ರಕರಣದಲ್ಲಿಯೂ ಅನ್ಸಾರ್ ಹೆಸರು ಕೇಳಿಬಂದಿತ್ತು. ಆದರೆ, ಸರಣಿಯಂತೆ ಪ್ರಕರಣ ದಾಖಲಾಗಿದ್ದರೂ ಅನ್ಸಾರ್ ಪೊಲೀಸರ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡಿದ್ದ.
Police Assistant Sub Inspector who went to service notice was attacked with the sword by rowdy shetter in Mulki. The arrested has been identified as Ansar.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm