ಬ್ರೇಕಿಂಗ್ ನ್ಯೂಸ್
10-04-21 04:21 pm Mysore Correspondent ಕರ್ನಾಟಕ
ಮೈಸೂರು, ಎ.10 : ಸುಮಾರು 11 ವರ್ಷಗಳಿಂದ 11 ಸಾವಿರ ಪುಸ್ತಕಗಳನ್ನು ಸಂಗ್ರಹಿಸಿ ಗ್ರಂಥಾಲಯ ನಿರ್ಮಿಸಿ ಸಾರ್ವಜನಿಕರ ಓದಿನ ದಾಹಕ್ಕೆ ಉಚಿತವಾಗಿ ಸೇವೆ ನೀಡುತ್ತಿದ್ದ ಕನ್ನಡ ಪ್ರೇಮಿ ಸೈಯದ್ ಇಸಾಕ್ ಅವರ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟಿದ್ದು, ಗ್ರಂಥಾಲಯ ಸಂಪೂರ್ಣ ಭಸ್ಮವಾಗಿದೆ.
ಕನ್ನಡ ಪ್ರೇಮಿ ಸೈಯದ್ ಇಸಾಕ್ ಕಳೆದ 11 ವರ್ಷಗಳಿಂದ ಮೈಸೂರಿನ ರಾಜೀವ್ ನಗರದಲ್ಲಿ ಸುಮಾರು 3 ಸಾವಿರ ಕನ್ನಡ ಪುಸ್ತಕಗಳು, 3 ಸಾವಿರ ಭಗವಗೀತೆ ಕೃತಿಗಳು, 3 ಸಾವಿರ ಕುರಾನ್ ಪ್ರತಿಗಳು, ಒಂದು ಸಾವಿರ ಉರ್ದು ಪುಸ್ತಕಗಳು, 1 ಸಾವಿರ ಬೈಬಲ್ ಕನ್ನಡ ಪ್ರತಿಗಳು ಹಾಗೂ ಇತರ 1 ಸಾವಿರ ಕನ್ನಡ ಪುಸ್ತಕಗಳನ್ನು ಇಟ್ಟುಕೊಂಡು ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಇಲ್ಲಿಗೆ ಬರುವ ಪುಸ್ತಕ ಪ್ರೇಮಿಗಳಿಗೆ ಉಚಿತವಾಗಿ ಗ್ರಂಥಾಲಯ ವ್ಯವಸ್ಥೆ ಒದಗಿಸಿದ್ದರು.
ರಾಜೀವ್ ನಗರದ ಮೂಡ ಪ್ರದೇಶಕ್ಕೆ ಸೇರಿದ್ದ ಈ ಸ್ಥಳದಲ್ಲಿ 2011 ರಲ್ಲಿ ಸೈಯ್ಯದ್ ಇಸಾಕ್ ಚಿಕ್ಕದೊಂದು ಗುಡಿಸಲು ಕಟ್ಟಿಕೊಂಡು ಗ್ರಂಥಾಲಯ ಆರಂಭಿಸಿದ್ದರು. ಬಳಿಕ ಶೀಟ್ ಹಾಕಿ ಮಳಿಗೆಯಾಗಿ ಮಾಡಿಕೊಂಡು 11 ಸಾವಿರ ಪುಸ್ತಕಗಳನ್ನು ಇಡುವುದರ ಜೊತೆಗೆ ನಿತ್ಯ 18 ದಿನ ಪತ್ರಿಕೆಗಳನ್ನು ತರಿಸುತ್ತಿದ್ದರು. ಬೆಳಗ್ಗೆ 6 ಗಂಟೆಯಿಂದ ಸಂಜೆ 7 ಗಂಟೆ ವರೆಗೆ ಪುಸ್ತಕ ಮತ್ತು ಪತ್ರಿಕೆಗಳನ್ನು ಸಾರ್ವಜನಿಕರಿಗೆ ಓದಲು ಉಚಿತವಾಗಿ ನೀಡುತ್ತಿದ್ದರು.

ಉರ್ದು ಭಾಷೆ ಮಾತನಾಡುವವರೇ ಹೆಚ್ಚಾಗಿರುವ ಈ ಪ್ರದೇಶದಲ್ಲಿ ಕನ್ನಡ ಹಾಗೂ ಜಾತ್ಯಾತೀತ ಮನೋಭಾವನೆ ಮೂಡಿಸುವ ಕೆಲಸವನ್ನು ಮಾಡುತ್ತಾ ಬಂದಿರುವೆ. ಗ್ರಂಥಾಲಯಕ್ಕೆ ಹಲವು ಭಾರೀ ಕಿಡಿಗೇಡಿಗಳು ತೊಂದರೆ ಕೊಟ್ಟಿದ್ದರು. ಶುಕ್ರವಾರ ಮುಂಜಾನೆ ಗ್ರಂಥಾಲಯಕ್ಕೆ ಕಿಡಿಗೇಡಿಗಳು ಬೆಂಕಿಯಿಟ್ಟು 11 ಸಾವಿರ ಪುಸ್ತಕಗಳನ್ನು ಬೆಂಕಿಯಲ್ಲಿ ಸುಟ್ಟು ಹಾಕಿದ್ದಾರೆ. ಅದರಲ್ಲಿ ದಾನಿಗಳು ನೀಡಿದ ಅಮೂಲ್ಯ ಪುಸ್ತಕಗಳು ಸೇರಿವೆ ಎಂದು ಸೈಯದ್ ಇಸಾಕ್ ಭಾವುಕರಾಗಿ ಹೇಳಿಕೊಂಡಿದ್ದಾರೆ.
ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಡಾ.ಪ್ರಕಾಶ್ ಗೌಡ ತಿಳಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm