ಬ್ರೇಕಿಂಗ್ ನ್ಯೂಸ್
12-04-21 10:45 pm Headline Karnataka News Network ಕರ್ನಾಟಕ
ಬೆಂಗಳೂರು, ಎ 12: ಕರ್ನಾಟಕ ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ನಾಲ್ಕರಿಂದ ಐದು ದಿನಗಳಲ್ಲಿ, ಅಂದರೆ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮತ್ತು ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ 15ರವರೆಗೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಏಪ್ರಿಲ್ 14ರಂದು ಬಳ್ಳಾರಿ, ಬೆಂಗಳೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಅತಿ ಹೆಚ್ಚೆಂದರೆ 34 ಡಿಗ್ರಿ ತಾಪಮಾನ ದಾಖಲಾಗಬಹುದು, ಅತಿ ಕಡಿಮೆಯೆಂದರೆ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟವನ್ನು ತಲುಪಿದ್ದು, ಜನಸಾಮಾನ್ಯರು ಬೆವರಿ ಬಳಲುತ್ತಿದ್ದಾರೆ. ಸುಡು ಬಿಸಿಲಿಗೆ ಕಂಗಾಲಾಗಿ ಒಂದು ಮಳೆ ಬರಲಿ ಎಂದು ಕಾಯುತ್ತಿದ್ದಾರೆ. ಹೀಗಾಗಿ ಈಗ ಹವಾಮಾನ ಇಲಾಖೆ ನುಡಿದಿರುವ ಭವಿಷ್ಯ ನಿಜವಾದಲ್ಲಿ ಜನರು ಕೊಂಚ ನಿರಾಳರಾಗಲಿದ್ದಾರೆ.

ಮಾರ್ಚ್ ತಿಂಗಳು ಪೂರ್ತಿ ಭಾರತದಲ್ಲಿ ತಾಪಮಾನ ಏರುಗತಿಯಲ್ಲೇ ಸಾಗಿದ್ದು, ಕಳೆದ 121 ವರ್ಷಗಳಲ್ಲಿ ಮಾರ್ಚ್ ತಿಂಗಳಲ್ಲಿ ಮೂರನೇ ಬಾರಿಗೆ ಈ ಪ್ರಮಾಣದ ಉಷ್ಣಾಂಶ ದಾಖಲಾಗಿದೆ ಎಂದು ವರದಿಗಳು ತಿಳಿಸಿವೆ. ಅಂತೆಯೇ ಕಳೆದ 11 ವರ್ಷಗಳಲ್ಲಿ ಇದು ತಿಂಗಳ ಗರಿಷ್ಠ ತಾಪಮಾನವಾಗಿದ್ದು, ಈ ಬಾರಿಯ ಮಾರ್ಚ್ನಲ್ಲಿ ದೇಶದಲ್ಲಿ ಸರಾಸರಿ 32.65 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಹೀಗೆಯೇ ಏಪ್ರಿಲ್ನಲ್ಲಿಯೂ ತಾಪಮಾನ ಏರುತ್ತಲೇ ಸಾಗಿತ್ತು. ಅಲ್ಲದೇ ಕೆಲವು ಪ್ರದೇಶಗಳಲ್ಲಿ ಮಳೆ ಸುರಿದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.
Weather forecast has started that heavy rains will be seen in Karnatakas few district by April 13th to 15th.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm