ಬ್ರೇಕಿಂಗ್ ನ್ಯೂಸ್
14-04-21 02:26 pm Headline Karnataka News Network ಕರ್ನಾಟಕ
ಶಿರಸಿ, ಏ. 14: ಕೊರೊನಾ ನಿಯಂತ್ರಣ ಮತ್ತು ಲಸಿಕೆ ಪಡೆಯುವಂತೆ ಜನರಲ್ಲಿ ಜಾಗೃತಿ ಮೂಡಿಸಲು ಶಿರಸಿಯ 17 ವಿದ್ಯಾರ್ಥಿಗಳು ಬುಧವಾರ ಬನವಾಸಿಯಿಂದ ಶಿರಸಿವರೆಗೆ ಸ್ಕೇಟಿಂಗ್ ಮಾಡಿದರು.
ಬನವಾಸಿಯ ಕದಂಬ ವೃತ್ತದಿಂದ ಸ್ಕೇಟಿಂಗ್ ಆರಂಭಿಸಿದ ವಿದ್ಯಾರ್ಥಿಗಳು ಮುಖ್ಯ ರಸ್ತೆಯಲ್ಲಿ ಸಾಗಿದರು. ಗುಡ್ನಾಪುರ, ಉಂಚಳ್ಳಿ, ಅರೆಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಜನರಿಗೆ ಕೊರೊನಾ ಲಸಿಕೆ ಕುರಿತು ಅರಿವು ಮೂಡಿಸುವ ಕರಪತ್ರ ಹಂಚಿದರು.
ರಸ್ತೆಯ ಒಂದು ಬದಿಯಲ್ಲಿ ಶಿಸ್ತುಬದ್ಧವಾಗಿ ವಿದ್ಯಾರ್ಥಿಗಳು ಸ್ಕೇಟಿಂಗ್ ಮಾಡುತ್ತಿದ್ದರೆ, ಅವರ ಪಕ್ಕದಲ್ಲಿ ಪೊಲೀಸರು, ಪಾಲಕರು ಸುರಕ್ಷತೆ ಸಲುವಾಗಿ ಸಾಲಾಗಿ ವಾಹನ ಚಲಾಯಿಸುತ್ತ ಸಾಗಿದರು.

ಎರಡೂವರೆ ಗಂಟೆ ಬಳಿಕ ಶಿರಸಿ ನಗರಕ್ಕೆ ತಲುಪಿದ ವಿದ್ಯಾರ್ಥಿಗಳು ಇಲ್ಲಿನ ಹಳೆ ಬಸ್ ನಿಲ್ದಾಣ ವೃತ್ತದಲ್ಲಿ ಸೇರಿ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಿದರು.
'ಏ.11 ರಿಂದ 14ರವರೆಗೆ ದೇಶವ್ಯಾಪಿ ಕೊರೊನಾ ಲಸಿಕೋತ್ಸವಕ್ಕೆ ಪ್ರಧಾನಿ ನೀಡಿದ ಕರೆಯಂತೆ ವಿಶಿಷ್ಟ ರೀತಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು' ಎಂದು ಕಾರ್ಯಕ್ರಮ ಆಯೋಜಕ ಅದ್ವೈತ ಸ್ಕೇಟಿಂಗ್ ಆ್ಯಂಡ್ ಸ್ಪೋರ್ಟ್ಸ್ ಕ್ಲಬ್ ನ ಕಿರಣಕುಮಾರ್ ತಿಳಿಸಿದರು.
'ಮೊದಲ ಬಾರಿಗೆ ಇಷ್ಟು ದೂರ ಸ್ಕೇಟಿಂಗ್ ಮಾಡುತ್ತ ಸಂಚರಿಸಿದ್ದು ಅವಿಸ್ಮರಣೀಯ ಅನುಭವ. ನಾವು ಮಾಡಿದ ಜಾಗೃತಿ ಜನರನ್ನು ತಲುಪಿದರೆ ಸಾರ್ಥಕ ಎನಿಸುತ್ತದೆ' ಎಂದು ವಿದ್ಯಾರ್ಥಿನಿ ಅನಘ ಪ್ರತಿಕ್ರಿಯಿಸಿದರು.
ಸ್ಕೇಟಿಂಗ್ ಮೂಲಕ ನಡೆಸಿದ ಜಾಗೃತಿ ಅಭಿಯಾನಕ್ಕೆ ಬನವಾಸಿಯಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ ಚಾಲನೆ ನೀಡಿದ್ದರು. ಸಿಪಿಐ ಬಿ.ಯು.ಪ್ರದೀಪ ನೇತೃತ್ವದಲ್ಲಿ ಸುರಕ್ಷತೆ ವಹಿಸಲಾಗಿತ್ತು.
Students in Sirsi go on Skating for 23 Kms to bring covid 19 vaccine awareness among people. The students were thrilled to travek so far.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 11:40 am
HK News Staffer
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm