ಬ್ರೇಕಿಂಗ್ ನ್ಯೂಸ್
15-04-21 05:37 pm Headline Karnataka News Network ಕರ್ನಾಟಕ
ಬೆಂಗಳೂರು,ಏ.15 : ಕುಂಭಮೇಳದ ಪವಿತ್ರ ಸ್ನಾನಕ್ಕೆ ಕರ್ನಾಟಕದಿಂದಲೂ ಭಕ್ತರು ತೆರಳಿದ್ದಾರೆ. ಕುಂಭಮೇಳದಲ್ಲಿ ಕೊರೊನಾ ಸೋಂಕಿತರು ಭಾಗವಹಿಸುವುದು ಕಂಡುಬಂದಿದೆ. ಅವರೆಲ್ಲರೂ ಕರ್ನಾಟಕಕ್ಕೆ ಬಂದ ಮೇಲೆ ಪ್ರತ್ಯೇಕ ವಾಸ ಮಾಡಿ, ಕೊರೊನಾ ಟೆಸ್ಟ್ ಮಾಡಿಸಬೇಕು. ಕೊರೊನಾ ನೆಗೆಟಿವ್ ಬಂದರೆ ಸರಿ, ಇಲ್ಲದಿದ್ದರೆ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ದೆಹಲಿ ಮತ್ತಿತರ ಕಡೆ ಜಾರಿಗೊಳಿಸಿದ ವಾರಾಂತ್ಯದ ಕರ್ಫ್ಯೂವನ್ನು ಸ್ವಾಗತಿಸುತ್ತೇವೆ. ಕೊರೊನಾ ಕೇಸ್ ಹೆಚ್ಚಳವಾದ ಕಾರಣ ಈ ಕ್ರಮಗಳು ಅನಿವಾರ್ಯವಾಗಿವೆ. ನಮ್ಮಲ್ಲೂ ಕೂಡ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನಾಳೆ ಹಿರಿಯ ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ವೈದ್ಯರ ಕಡ್ಡಾಯ ಸೇವೆಗೆ ಆದೇಶದ ಕುರಿತೂ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್, ಕೆಲವು ವೈದ್ಯರು ಗ್ರಾಮೀಣ ಭಾಗದಲ್ಲಿ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಕುರಿತು ಆರೋಗ್ಯ ಇಲಾಖೆ ಪ್ರಮುಖರ ಜತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಕುಂಭಮೇಳದ 3ನೇ ಶಾಹಿ ಸ್ನಾನದಲ್ಲಿ 13 ಲಕ್ಷ ಭಕ್ತರು ಭಾಗಿ, 5 ದಿನಗಳಲ್ಲಿ 2,167 ಮಂದಿಗೆ ಕೊವಿಡ್. ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಏಪ್ರಿಲ್ 10ರಿಂದ ಈವರೆಗೆ 2,167 ಮಂದಿಗೆ ಕೊವಿಡ್ ದೃಢಪಟ್ಟಿದೆ. ಈ ಪೈಕಿ 18 ಸ್ವಾಮೀಜಿಗಳಿಗೆ ಕೊರೊನಾ ಸೋಂಕು ತಗಲಿದೆ. ಮಂಗಳವಾರ 9 ಸಾಮೀಜಿಗಳಿಗೆ ಸೋಂಕು ತಗುಲಿದ್ದು, ಇದಕ್ಕಿಂತ ಮುಂಚೆ 9 ಸ್ವಾಮೀಜಿಗಳಿಗೆ ಸೋಂಕು ತಗಲಿರುವುದು ದೃಢಪಟ್ಟಿತ್ತು ಎಂದು ಹರಿದ್ವಾರದ ಮುಖ್ಯ ವೈದ್ಯಕೀಯ ಅಧಿಕಾರಿ (CMO) ಡಾ.ಎಸ್.ಕೆ ಝಾ ಹೇಳಿದ್ದಾರೆ. ಏಪ್ರಿಲ್ 13 ಮತ್ತು ಏಪ್ರಿಲ್ 14ರಂದು ಕುಂಭ ಮೇಳದಲ್ಲಿ ಭಾಗವಹಿಸಿದ ಭಕ್ತರಿಗೆ ಆರ್ಟಿಪಿಸಿಆರ್ ಪರೀಕ್ಷೆ ಮಾಡಿದರೆ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆಯಾಗಬಹುದು ಎಂದು ಅವರು ಹೇಳಿದ್ದಾರೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೊವಿಡ್ ಸೋಂಕಿತರ ಸಂಖ್ಯೆ ಎರಡು ಲಕ್ಷ ದಾಟಿದೆ. ಬುಧವಾರ ದೇಶದಲ್ಲಿ ಪತ್ತೆಯಾದ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 2,00,739 ಆಗಿದ್ದು, 1,038 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಒಟ್ಟು ಸೋಂಕಿತರ ಸಂಖ್ಯೆ 1,40,74,564 (1.4 ಕೋಟಿಗೆ) ತಲುಪಿದ್ದು ಈವರೆಗೆ ಸಾವಿಗೀಡಾದವ ಸಂಖ್ಯೆ 1,73,123 ಆಗಿದೆ. ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 14,71,877 ಆಗಿದ್ದು, 1,24,29,564 ಮಂದಿ ಚೇತರಿಸಿಕೊಂಡಿದ್ದಾರೆ. 11,44,93,238 ಮಂದಿ ಲಸಿಕೆ ಪಡೆದಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
Read: ಕೊರೊನಾ ಹಾಟ್ ಸ್ಪಾಟ್ ಆಗ್ತಿದ್ಯಾ ಕುಂಭಮೇಳ ! 1700 ಜನಕ್ಕೆ ಪಾಸಿಟಿವ್ !
The Karnataka government has asked those returning from Kumbh Mela at Haridwar to get themselves quarantined and get tested for coronavirus infection.
08-09-25 05:21 pm
HK News Desk
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm