ಬ್ರೇಕಿಂಗ್ ನ್ಯೂಸ್
16-04-21 12:31 pm Headline Karnataka News Network ಕರ್ನಾಟಕ
ಬೆಂಗಳೂರು, ಏಪ್ರಿಲ್ 16: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು, ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ್ದಾರೆ.
ಸಭೆ ನಂತರ ಮಾತನಾಡಿದ ಅವರು, "8 ಜಿಲ್ಲೆಗಳಲ್ಲಿ ಏಪ್ರಿಲ್ 20ವರೆಗೂ ರಾತ್ರಿ ಕರ್ಫ್ಯೂ ಮುಂದುವರಿಯುವುದು. ರಾತ್ರಿ 10 ರಿಂದ ಬೆಳಿಗ್ಗೆ 6 ತನಕ ನೈಟ್ ಕರ್ಫ್ಯೂ ಇರುವುದು. ಇತರೆ ಜಿಲ್ಲೆಗಳಿಗೆ ಕರ್ಫ್ಯೂ ವಿಸ್ತರಣೆ ಕುರಿತು ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು" ಎಂದು ತಿಳಿಸಿದರು.

ಕೋವಿಡ್ ಸಾಂಕ್ರಾಮಿಕ ನಿಯಂತ್ರಣ ಕುರಿತಂತೆ ಅಧಿಕಾರಿಗಳ ಸಭೆ ನಡೆಸಲಾಗಿದೆ. ಏಪ್ರಿಲ್ 20ರಂದು ಮತ್ತೊಮ್ಮೆ ಚರ್ಚೆ ನಡೆಸಿ, ಕರ್ಫ್ಯೂ ಬಗ್ಗೆ ನಿರ್ಧಾರ ಮಾಡಲಾಗುವುದು. ಲಾಕ್ ಡೌನ್, ಇನ್ನಷ್ಟು ಕಠಿಣ ಕ್ರಮ ಬಗ್ಗೆ ಪ್ರಧಾನಿ ಮೋದಿ ಹಾಗೂ ಆರೋಗ್ಯ ಸಚಿವಾಲಯದ ಸೂಚನೆಯಂತೆ ಕ್ರಮ ಜರುಗಿಸಲಾಗುವುದು. ಏಪ್ರಿಲ್ 18ರಂದು ಸರ್ವಪಕ್ಷಗಳ ಸಭೆಯಲ್ಲೂ ಚರ್ಚೆ ನಡೆಸಲಾಗುತ್ತದೆ ಎಂದು ಹೇಳಿದರು. ನಮ್ಮ ರಾಜ್ಯದ ಪರಿಸ್ಥಿತಿಯನ್ನು ಬೇರೆ ರಾಜ್ಯದ ಜೊತೆ ಹೋಲಿಸಬೇಡಿ ಎಂದರು.
ಗುರುವಾರ ರಾಜ್ಯದಲ್ಲಿ 14,738 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 66 ಮಂದಿ ಸಾವನ್ನಪ್ಪಿದ್ದರು. ಬೆಂಗಳೂರು ಒಂದರಿಂದಲೇ 10,497 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಬೆನ್ನಲ್ಲೇ ತುರ್ತು ಸಭೆ ಕರೆದಿದ್ದರು. ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Read: ರಾಜ್ಯದಲ್ಲಿ ಕೊರೊನಾ ಆರ್ಭಟ; ತುರ್ತು ಸಭೆ ಕರೆದ ಸಿಎಂ ಬಿ.ಎಸ್.ಯಡಿಯೂರಪ್ಪ
Night curfew in Karnataka to continue till April 20 says CM BS Yediyurappa after covid 19 review meeting with officials.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm