ಬ್ರೇಕಿಂಗ್ ನ್ಯೂಸ್
18-04-21 11:55 am Headline Karnataka News Network ಕರ್ನಾಟಕ
ಬೆಂಗಳೂರು, ಎ 18: ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ, ಪ್ರಸಂಗಕರ್ತೃ, ವಾಗ್ಮಿ ಪ್ರೊ. ಎಂ.ಎ.ಹೆಗಡೆ (73) ಅವರು ಭಾನುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ನಿಧನರಾದರು.
ಎಂ.ಎ.ಹೆಗಡೆ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಏಪ್ರಿಲ್ 13ರಂದು ದೃಢಪಟ್ಟಿತ್ತು. ಶನಿವಾರ ಮುಂಜಾನೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು.
ಯಕ್ಷಗಾನದ ಅರ್ಥಧಾರಿ ಹಾಗೂ ಪ್ರಸಂಗಕರ್ತರಾಗಿದ್ದ ಅವರು ಎರಡನೇ ಅವಧಿಗೆ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿದ್ದರು. ಕೋವಿಡ್–19 ಲಾಕ್ಡೌನ್ ಅವಧಿಯಲ್ಲಿ ಹಿರಿಯ ಹಾಗೂ ಪ್ರಸಿದ್ಧ ಯಕ್ಷಗಾನ ಹಿರಿಯ ಕಲಾವಿದರ ಜೊತೆ ವರ್ಚುವಲ್ ರೂಪದಲ್ಲಿ ‘ಮಾತಿನ ಮಂಟಪ’ ಮಾತುಕತೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಡಿ 100ಕ್ಕೂ ಅಧಿಕ ಕಲಾವಿದರ ಬದುಕಿನ ಚಿತ್ರಣವನ್ನು ಕಟ್ಟಿಕೊಟ್ಟಿದ್ದರು. ‘ಮಾತಿನ ಮಂಟಪ’ ಕಾರ್ಯಕ್ರಮದ ಮೂಲಕ 70 ವರ್ಷ ಮೀರಿದ ಕಲಾವಿದ ಸಂದರ್ಶನವನ್ನು ವರ್ಚುವಲ್ ರೂಪದಲ್ಲಿ ಕಟ್ಟಿಕೊಟ್ಟಿದ್ದರು. ಈ ಸರಣಿಯಲ್ಲಿ 50ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಅಕಾಡೆಮಿಯು ರೂಪಿಸಿತ್ತು. ಕಲಾವಿದರ ಸಾಧನೆ, ಚಿಂತನೆ ಹಾಗೂ ಅವರ ಕಲಾ ಬದುಕನ್ನು ಯಕ್ಷಗಾನದ ಅಭಿಮಾನಿಗಳಿಗೆ ತಿಳಿಸುವ ಈ ಕಾರ್ಯಕ್ರಮ ಸರಣಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
ಅಕಾಡೆಮಿ ಅಧ್ಯಕ್ಷರಾಗಿ ಕಲೆ, ಕಲಾವಿದರ ಉನ್ನತಿಗಾಗಿ ಎಂ.ಎ.ಹೆಗಡೆ ಅವರು ಸಾಕಷ್ಟು ಶ್ರಮಿಸಿದ್ದರು. ಕಲಾವಿದರ ವಲಯದಲ್ಲಿಯೂ ಹೆಗಡೆ ಅವರ ಬಗ್ಗೆ ಅಪಾರ ಗೌರವವಿತ್ತು.
President of Karnataka Yakshagana Bayalata Academy, well-known author of Yakshagana Prasangas and gifted orator Prof M A Hegde (73) passed away in the city on Sunday April 18 morning on account of breathing difficulties.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm