ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.

ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm