ಬ್ರೇಕಿಂಗ್ ನ್ಯೂಸ್
21-04-21 10:34 pm Headline Karnataka News Network ಕರ್ನಾಟಕ
ಬೆಂಗಳೂರು, ಎ.21: ಮುಷ್ಕರ ನಿಲ್ಲಿಸಿ, ತಕ್ಷಣ ಕರ್ತವ್ಯಕ್ಕೆ ಹಾಜರಾಗುವಂತೆ ಹೈಕೋರ್ಟ್ ಛಾಟಿ ಬೀಸುತ್ತಿದ್ದಂತೆಯೇ ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಸಿ ಮುಟ್ಟಿದೆ. ಹೈಕೋರ್ಟ್ ಸೂಚನೆ ಪರಿಗಣಿಸಿ ಇಂದು ಬೆಳಗ್ಗೆ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಇದರೊಂದಿಗೆ ಕಳೆದ 15 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಮುಷ್ಕರ ದಿಢೀರ್ ಅಂತ್ಯಗೊಂಡಿದೆ.
ಅತ್ತ ಹೆಚ್ಚಿನ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಂತೆ ಮುಖಭಂಗ ಅನುಭವಿಸಿದ ಸಾರಿಗೆ ನೌಕರರ ಸಂಘದವರು ಅನಿವಾರ್ಯ ಎಂಬಂತೆ ಮುಷ್ಕರ ಕೈಬಿಟ್ಟಿದ್ದಾಗಿ ಹೇಳಿಕೆ ನೀಡಿದ್ದಾರೆ. ಅಲ್ಲದೆ, ತಾತ್ಕಾಲಿಕವಾಗಿ ಮುಷ್ಕರ ಹಿಂಪಡೆಯುತ್ತಿದ್ದು ಮತ್ತೆ ಮುಷ್ಕರ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಮುಷ್ಕರದಲ್ಲಿ ಪಾಲ್ಗೊಂಡಿದ್ದಲ್ಲದೆ, ಇತರರನ್ನೂ ಮುಷ್ಕರಕ್ಕೆ ಒತ್ತಾಯಿಸುತ್ತಿದ್ದ ಕಾರಣಕ್ಕೆ ತರಬೇತಿ ನಿರತ ಮತ್ತು ಖಾಯಂ ಸೇರಿ 1900 ಕ್ಕೂ ಹೆಚ್ಚು ಸಾರಿಗೆ ನೌಕರರನ್ನು ಕರ್ತವ್ಯದಿಂದ ವಜಾ ಮಾಡಲಾಗಿತ್ತು. ಅಲ್ಲದೆ, 2900ಕ್ಕೂ ಹೆಚ್ಚು ಮಂದಿಯನ್ನು ಅಮಾನತು ಮಾಡಲಾಗಿತ್ತು.

ಈ ನಡುವೆ, ಮಂಗಳವಾರ ಸಾರ್ವಜನಿಕ ಹಿತಾಸಕ್ತಿ ದೂರಿನ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಕೋವಿಡ್ ಸಂಕಷ್ಟದ ನಡುವೆ ಸಾರಿಗೆ ನೌಕರರು ಮುಷ್ಕರ ನಡೆಸುವುದು ಸರಿಯಲ್ಲ. ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿತ್ತು. ಇದರಂತೆ ಬುಧವಾರ ಹೆಚ್ಚಿನ ಮಂದಿ ಸಾರಿಗೆ ಸಿಬಂದಿ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ನಡುವೆ, ಅಮಾನತಾದ ಮತ್ತು ವಜಾ ಆಗಿರುವ ಸಿಬಂದಿ ಅತಂತ್ರಕ್ಕೆ ಸಿಲುಕಿದ್ದಾರೆ. ಅವರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕೆಂಬ ಬೇಡಿಕೆಯನ್ನೂ ಮುಂದಿರಿಸದೆ ಸಾರಿಗೆ ನೌಕರರ ಸಂಘದವರು ಮುಷ್ಕರ ಹಿಂಪಡೆದಿರುವುದು ಸಿಬಂದಿಯನ್ನು ಇಕ್ಕಟ್ಟಿಗೆ ಸಿಲುಕಿದ್ದಾರೆ.
The Karnataka State Road Transport Employees League called off its two-week-long strike on Wednesday a day after the Karnataka High Court observed that the workers of the state road transport corporations (RTCs) had chosen the "worst time to go on a strike" citing the pandemic.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm