ಬ್ರೇಕಿಂಗ್ ನ್ಯೂಸ್
22-04-21 09:37 pm Headline Karnataka News Network ಕರ್ನಾಟಕ
ಬೆಂಗಳೂರು: ಸರ್ಕಾರ ಏಕಾಏಕಿ ರಾಜ್ಯದಲ್ಲಿ ಕೊರೊನಾ ತಡೆಗೆ ಇಂದು ಪ್ರಕಟಿಸಿರುವ ಮಾರ್ಗಸೂಚಿ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ರಾಜ್ಯ ಸರ್ಕಾರ ತುಘಲಕ್ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಆಸ್ಪತ್ರೆಯಿಂದಲೇ ಮಾತನಾಡಿದ ಅವರು, ಏಕಾಏಕಿ ಅಂಗಡಿ-ಮುಂಗಟ್ಟು ಮುಚ್ಚಿಸಲು ಅಧಿಕಾರ ಕೊಟ್ಟವರು ಯಾರು. ಮುಖ್ಯಮಂತ್ರಿಗಳು ಆಸ್ಪತ್ರೆಯಿಂದ ಮಧ್ಯಾಹ್ನ ಡಿಸ್ಚಾರ್ಜ್ ಆದ ನಂತರ ಸಚಿವರ ಸಭೆ ನಡೆಸಿದ ಬಳಿಕ ಮಾರ್ಗಸೂಚಿಗಳನ್ನು ಘೋಷಣೆ ಮಾಡದೆ ಮದ್ಯದ ಅಂಗಡಿಗಳನ್ನು ಬಿಟ್ಟು ಇತರೆ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಅವರಿಗೆ ಬದಲಿ ವ್ಯವಸ್ಥೆ ಏನು ಮಾಡಿದ್ದೀರಾ. ಅಂಗಡಿಗಳಲ್ಲಿ ಕೆಲಸ ಮಾಡುವವರ ಪಾಡೇನು ಎಂದು ಪ್ರಶ್ನಿಸಿದರು.

ಮೊನ್ನೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಾಕ್ಡೌನ್ ಮಾಡುವುದು ಒಳ್ಳೆಯದು. ಇದರಿಂದ ಕೋವಿಡ್ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ ಎಂದು ಸಲಹೆ ಕೊಟ್ಟಿದ್ದೆ.ಆದರೆ, ಪ್ರಧಾನಿಗಳ ಸಲಹೆ ಬಂದ ನಂತರ ಸರ್ಕಾರವೇ ಹಿಂದೆ ಸರಿದು ಈಗ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಸರ್ಕಾರಕ್ಕೆ ದೂರದೃಷ್ಟಿ ಇಲ್ಲ. ತಿಳುವಳಿಕೆ, ಅನುಭವಸ್ಥರಿಂದ ಸಲಹೆ ಪಡೆಯದೇ, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಯೋಚಿಸದೇ ಈ ಕ್ರಮ ಕೈಗೊಂಡಿರುವುದು ಸರಿಯಲ್ಲ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗುತ್ತದೆ.

ಆಕ್ಸಿಜನ್ ಕೊರತೆಯಿದೆ. ಬೆಡ್ ಸಮಸ್ಯೆ ಇದೆ. ಉನ್ನತಮಟ್ಟದ ಸಮಿತಿ ಸಭೆ ತೀರ್ಮಾನದ ಬಗ್ಗೆ ತಿಳಿಸಿ. ಬಯಲು ಪ್ರದೇಶಗಳಲ್ಲಿ ಶೆಡ್ಗಳನ್ನು ನಿರ್ಮಿಸಿ ವೈದ್ಯರ ತಂಡ ರಚಿಸುವ ಮೂಲಕ ಜನರ ಜೀವ ಉಳಿಸಬೇಕು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದಾರೆ
Former CM H D Kumaraswamy Thursday criticised the B S Yediyurappa-led BJP government video statement recorded from a private hospital in Bengaluru, where he is admitted due to Covid-19.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm