ಬ್ರೇಕಿಂಗ್ ನ್ಯೂಸ್
22-04-21 09:37 pm Headline Karnataka News Network ಕರ್ನಾಟಕ
ಬೆಂಗಳೂರು: ಸರ್ಕಾರ ಏಕಾಏಕಿ ರಾಜ್ಯದಲ್ಲಿ ಕೊರೊನಾ ತಡೆಗೆ ಇಂದು ಪ್ರಕಟಿಸಿರುವ ಮಾರ್ಗಸೂಚಿ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಕೆಂಡಾಮಂಡಲರಾಗಿದ್ದಾರೆ. ರಾಜ್ಯ ಸರ್ಕಾರ ತುಘಲಕ್ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.
ಆಸ್ಪತ್ರೆಯಿಂದಲೇ ಮಾತನಾಡಿದ ಅವರು, ಏಕಾಏಕಿ ಅಂಗಡಿ-ಮುಂಗಟ್ಟು ಮುಚ್ಚಿಸಲು ಅಧಿಕಾರ ಕೊಟ್ಟವರು ಯಾರು. ಮುಖ್ಯಮಂತ್ರಿಗಳು ಆಸ್ಪತ್ರೆಯಿಂದ ಮಧ್ಯಾಹ್ನ ಡಿಸ್ಚಾರ್ಜ್ ಆದ ನಂತರ ಸಚಿವರ ಸಭೆ ನಡೆಸಿದ ಬಳಿಕ ಮಾರ್ಗಸೂಚಿಗಳನ್ನು ಘೋಷಣೆ ಮಾಡದೆ ಮದ್ಯದ ಅಂಗಡಿಗಳನ್ನು ಬಿಟ್ಟು ಇತರೆ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಅವರಿಗೆ ಬದಲಿ ವ್ಯವಸ್ಥೆ ಏನು ಮಾಡಿದ್ದೀರಾ. ಅಂಗಡಿಗಳಲ್ಲಿ ಕೆಲಸ ಮಾಡುವವರ ಪಾಡೇನು ಎಂದು ಪ್ರಶ್ನಿಸಿದರು.

ಮೊನ್ನೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಲಾಕ್ಡೌನ್ ಮಾಡುವುದು ಒಳ್ಳೆಯದು. ಇದರಿಂದ ಕೋವಿಡ್ ನಿಯಂತ್ರಣ ಮಾಡಲು ಸಹಕಾರಿಯಾಗುತ್ತದೆ ಎಂದು ಸಲಹೆ ಕೊಟ್ಟಿದ್ದೆ.ಆದರೆ, ಪ್ರಧಾನಿಗಳ ಸಲಹೆ ಬಂದ ನಂತರ ಸರ್ಕಾರವೇ ಹಿಂದೆ ಸರಿದು ಈಗ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಸರ್ಕಾರಕ್ಕೆ ದೂರದೃಷ್ಟಿ ಇಲ್ಲ. ತಿಳುವಳಿಕೆ, ಅನುಭವಸ್ಥರಿಂದ ಸಲಹೆ ಪಡೆಯದೇ, ಜನಸಾಮಾನ್ಯರ ಸಮಸ್ಯೆಗಳ ಬಗ್ಗೆ ಯೋಚಿಸದೇ ಈ ಕ್ರಮ ಕೈಗೊಂಡಿರುವುದು ಸರಿಯಲ್ಲ. ಇದರಿಂದ ಹಲವಾರು ಕುಟುಂಬಗಳು ಬೀದಿಗೆ ಬರುವ ಸ್ಥಿತಿ ನಿರ್ಮಾಣವಾಗುತ್ತದೆ.

ಆಕ್ಸಿಜನ್ ಕೊರತೆಯಿದೆ. ಬೆಡ್ ಸಮಸ್ಯೆ ಇದೆ. ಉನ್ನತಮಟ್ಟದ ಸಮಿತಿ ಸಭೆ ತೀರ್ಮಾನದ ಬಗ್ಗೆ ತಿಳಿಸಿ. ಬಯಲು ಪ್ರದೇಶಗಳಲ್ಲಿ ಶೆಡ್ಗಳನ್ನು ನಿರ್ಮಿಸಿ ವೈದ್ಯರ ತಂಡ ರಚಿಸುವ ಮೂಲಕ ಜನರ ಜೀವ ಉಳಿಸಬೇಕು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದಾರೆ
Former CM H D Kumaraswamy Thursday criticised the B S Yediyurappa-led BJP government video statement recorded from a private hospital in Bengaluru, where he is admitted due to Covid-19.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm