ಬ್ರೇಕಿಂಗ್ ನ್ಯೂಸ್
23-04-21 10:40 pm Headline Karnataka News Network ಕರ್ನಾಟಕ
ಸುಬ್ರಹ್ಮಣ್ಯ, ಏ.23 : ರಾಜ್ಯದ ನಂಬರ್ ವನ್ ಶ್ರೀಮಂತ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮತ್ತೆ ಅಕ್ರಮದ ಗಂಭೀರ ಆರೋಪ ಕೇಳಿಬಂದಿದೆ.
ಕುಕ್ಕೆ ಸುಬ್ರಹ್ಮಣ್ಯದ ಆದಾಯದ ಲೆಕ್ಕ ಪರಿಶೋಧನೆಯೇ ನಡೆದಿಲ್ಲ. ಕಣ್ಣಳತೆಗೇ ಆದಾಯ ತೋರಿಸಿ ದೇವಸ್ಥಾನದ ಆಡಳಿತ ಮಂಡಳಿ ಲೆಕ್ಕ ಕೊಡುತ್ತಿದೆ. ಕಳೆದ 5 ವರ್ಷದಿಂದ ದೇವಳದ ಲೆಕ್ಕ ಪರಿಶೋಧನೆ ನಡೆದೇ ಇಲ್ಲ. ವಾರ್ಷಿಕ ಆದಾಯದಲ್ಲಿ ಭಾರೀ ಗೋಲ್ಮಾಲ್ ನಡೆದಿದೆ ಎಂದು ಕುಕ್ಕೆ ದೇವಸ್ಥಾನದ ಆಡಳಿತ ಮಂಡಳಿ ವಿರುದ್ಧ ವಕೀಲರೊಬ್ಬರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಧಾರ್ಮಿಕ ದತ್ತಿ ಇಲಾಖೆಗೆ ದೂರು ನೀಡಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ದೂರು ನೀಡಿರುವ ಬೆಂಗಳೂರು ಮೂಲದ ವಕೀಲ ಶ್ರೀಹರಿ ಕುತ್ಸ ಎಂಬವರು ದೇವಸ್ಥಾನದ ವಿರುದ್ಧದ ದೂರಿನಲ್ಲಿ ಪ್ರಮುಖ ಅಂಶಗಳ ಉಲ್ಲೇಖ ಮಾಡಿದ್ದಾರೆ.
ಐದು ವರ್ಷಗಳಲ್ಲಿ 100 ಕೋಟಿಗೂ ಹೆಚ್ಚು ಹಣ ಸಂಗ್ರಹ
ಪ್ರತಿವರ್ಷ ಅಂದಾಜಿನ ಮಾಹಿತಿಯನ್ನೇ ಕ್ಷೇತ್ರದ ಆಡಳಿತ ಮಂಡಳಿ ನೀಡುತ್ತಿದೆ. 5 ವರ್ಷಗಳಲ್ಲಿ 100 ಕೋಟಿಗೂ ಹೆಚ್ಚು ಹಣ ಸಂಗ್ರಹವಾದರೂ ಲೆಕ್ಕ ಪರಿಶೋಧನೆ ಆಗದಿರೋದು ಭಾರೀ ಅನುಮಾನಕ್ಕೆ ಎಡಮಾಡಿಕೊಟ್ಟಿದೆ. ಕ್ಷೇತ್ರದ ಆಡಳಿತ ಮಂಡಳಿ 60 ಕೋಟಿಗೂ ಅಧಿಕ ರೂಪಾಯಿ ಪೋಲು ಮಾಡಿರುವ ಅನುಮಾನವಿದೆ.

ಕ್ಷೇತ್ರದ ಆಡಳಿತ ಮಂಡಳಿ ಧಾರ್ಮಿಕೇತರ ಚಟುವಟಿಕೆಗಳಿಗೆ ಹಣ ಪೋಲು ಮಾಡಿದೆ. ದೇಗುಲಕ್ಕೆ ಸಂಬಂಧಪಡದ ವ್ಯಕ್ತಿಗಳು ದೇವಸ್ಥಾನದ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ. ಕ್ಷೇತ್ರಕ್ಕೆ ಹರಕೆ ರೂಪದಲ್ಲಿ ಬಂದ ಚಿನ್ನ, ಬೆಳ್ಳಿ ಆಭರಣಗಳ ಬಗ್ಗೆ ಸಮರ್ಪಕವಾದ ಮಾಹಿತಿಯೇ ದೇವಸ್ಥಾನದ ಬಳಿ ಇಲ್ಲ.
ರಿಜೆಕ್ಟ್ ಆಗಿರುವ ಚಿನ್ನಾಭರಣದ ಲೆಕ್ಕ ತೋರಿಸಿಲ್ಲ. ದೇವಳಕ್ಕೆ ಬಂದ ಚಿನ್ನಾಭರಣವನ್ನು ಕರಗಿಸಲಾಗುತ್ತದೆ. ಕರಗಿಸಿದ ವೇಳೆ ಬಂದ ಒಳ್ಳೆಯ ಚಿನ್ನದ ಲೆಕ್ಕ ಮಾತ್ರ ಕೊಡಲಾಗಿದೆ. ಕರಗಿಸಿದ ವೇಳೆ ರಿಜೆಕ್ಟ್ ಆದ ಚಿನ್ನಾಭರಣದ ಲೆಕ್ಕವನ್ನು ತೋರಿಸಿಲ್ಲ. ಈ ಲೆಕ್ಕವೇ ಲಕ್ಷಾಂತರ ರೂಪಾಯಿ ರೂಪದಲ್ಲಿ ಇರಬೇಕಿದೆ. ಇನ್ನು ದೇವಸ್ಥಾನಕ್ಕೆ ಸಂಬಂಧಿಸಿದ ಅಂಗಡಿ ಬಾಡಿಗೆ, ಕಟ್ಟಡ ನಿರ್ವಹಣೆ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಪ್ರತಿವರ್ಷ ಹರಾಜು ಪ್ರಕ್ರಿಯೆ ಮಾಡಬೇಕು.

ಆದರೆ ಸುಬ್ರಹ್ಮಣ್ಯದಲ್ಲಿ ಈ ಪ್ರಕ್ರಿಯೆ ಯಾವುದೂ ನಡೆಯುತ್ತಿಲ್ಲ. ಹಲವಾರು ವರ್ಷಗಳಿಂದ ಇದ್ದವರೇ ಈ ಆಸ್ತಿಯನ್ನು ನೋಡಿಕೊಳ್ಳುತ್ತಿದ್ದಾರೆ. ಸಮರ್ಪಕವಾಗಿ ಬಾಡಿಗೆಯನ್ನೂ ಯಾರೂ ನೀಡುತ್ತಿಲ್ಲ ಅಂತಾ ವಕೀಲ ಶ್ರೀಹರಿ ದೂರಿನಲ್ಲಿ ಉಲ್ಲೇಖ ಮಾಡಿದ್ದಾರೆ. ಕ್ಷೇತ್ರದಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದಿದ್ದು, ಸರ್ಕಾರ ತನಿಖೆ ಮಾಡಬೇಕು ಅಂತಾ ಮುಖ್ಯಮಂತ್ರಿಗಳಿಗೆ ಕೊಟ್ಟ ದೂರಿನಲ್ಲಿ ಶ್ರೀಹರಿ ಕುತ್ಸ ಉಲ್ಲೇಖ ಮಾಡಿದ್ದಾರೆ.
ವಕೀಲ ಶ್ರೀಹರಿ ನೀಡಿರುವ ದೂರಿನ ಬಗ್ಗೆ ಪ್ರತಿಕ್ರಿಯಿಸಿದ ಪುತ್ತೂರು ಉಪ ವಿಭಾಗಾಧಿಕಾರಿ ಡಾ.ಯತೀಶ್ ಉಳ್ಳಾಲ್, ದೂರು ನೀಡಿರುವ ಬಗ್ಗೆ ಈಗಾಗಲೇ ಮಾಹಿತಿ ಬಂದಿದೆ. ಪರಿಶೀಲನೆ ಮಾಡುವಂತೆ ಈ ಹಿಂದೆಯೇ ಸೂಚಿಸಿದ್ದೇನೆ. ಲೆಕ್ಕ ಪರಿಶೋಧನೆ ಮಾಡಲು ಈ ಹಿಂದೆಯೇ ಕ್ಷೇತ್ರದ ಕಾರ್ಯ ನಿರ್ವಹಣಾಧಿಕಾರಿಗೆ ಸೂಚಿಸಿದ್ದೆ. ಲೆಕ್ಕ ಪರಿಶೋಧನೆ ಆದರೆ ಕ್ಷೇತ್ರದ ಅಭಿವೃದ್ಧಿಗೂ ಪೂರಕವಾಗುತ್ತದೆ ಅಂತ ಪ್ರತಿಕ್ರಿಯೆ ನೀಡಿದ್ದಾರೆ.
A complaint has been filed to Karnataka CM against Kukke Shri Subrahmanya Temple trust for misuse of temple funds.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm