ಬ್ರೇಕಿಂಗ್ ನ್ಯೂಸ್
24-04-21 09:47 am Headline Karnataka News Network ಕರ್ನಾಟಕ
ಬೆಂಗಳೂರು, ಏ. 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಯಲಿದ್ದು, ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕಾಲೇಜುಗಳಲ್ಲಿಯೇ ನಡೆಸಲು ತೀರ್ಮಾನಿಸಲಾಗಿದೆ.
ಸರ್ಕಾರದ ಆದೇಶದಂತೆ ವಾರಾಂತ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಹಿನ್ನೆಲೆ ಶನಿವಾರ ಹಾಗೂ ಭಾನುವಾರಗಳಂದು ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸುವಂತಿಲ್ಲ.

ಕೇಂದ್ರ ಕಚೇರಿ ವತಿಯಿಂದ ಪ್ರಾಯೋಗಿಕ ಪರೀಕ್ಷೆಯ ಆಯ್ದ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಲಾಗುವುದು. ಏನಾದರೂ ಮೌಲ್ಯಮಾಪನದಲ್ಲಿ ಲೋಪಗಳು ಕಂಡು ಬಂದಲ್ಲಿ ಸಂಬಂಧಿಸಿದ ಪ್ರಾಂಶುಪಾಲರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು.
ಪರೀಕ್ಷೆ ಬರೆಯಲು ಬರುವ ವಿದ್ಯಾರ್ಥಿಗಳ ಟೆಂಪರೇಚರ್ ಪರೀಕ್ಷಿಸಿ ಒಳಗೆ ಪ್ರವೇಶ ನೀಡಬೇಕು. ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ಲೇಖನ ಸಾಮಗ್ರಿಗಳನ್ನು ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಪೂರೈಸಲಾಗಿದೆ.

ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರುಗಳು ಇವುಗಳನ್ನು ಪಡೆದುಕೊಂಡು ತಮ್ಮ ಕೇಂದ್ರಕ್ಕೆ ಟ್ಯಾಗ್ ಆಗಿರುವ ಕಾಲೇಜುಗಳ ಪ್ರಾಂಶುಪಾಲರಿಗೆ ಆ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಉತ್ತರ ಪತ್ರಿಕೆಗಳು ಮತ್ತು ಅಂಕಪಟ್ಟಿಯನ್ನು ನೀಡಿ ಪ್ರತಿದಿನ ಟ್ಯಾಗ್ ಆಗಿರುವ ಕಾಲೇಜುಗಳ ವಿವಿಧ ವಿಷಯಗಳ ಉಪನ್ಯಾಸಕರುಗಳು ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಬಂದು ಅಂಕಗಳನ್ನು ನಮೂದಿಸಬೇಕು.

ನಾಮಿನಲ್ ರೋಲ್ ಮತ್ತು ಅಂಕ ಪಟ್ಟಿಯನ್ನು ನೀಡಿ ಪ್ರಾಯೋಗಿಕ ಪರೀಕ್ಷೆಯನ್ನು ತಮ್ಮ ಕಾಲೇಜು ಹಂತದಲ್ಲಿ ನಡೆಸಿ ಆಯಾ ದಿನದಂದೇ ಪ್ರಾಯೋಗಿಕ ಪರೀಕ್ಷಾ ಕೇಂದ್ರಕ್ಕೆ ಉತ್ತರ ಪತ್ರಿಕೆ ಮತ್ತು ಭರ್ತಿ ಮಾಡಿದ ಅಂಕ ಪಟ್ಟಿಗಳನ್ನು ಹಿಂದಿರುಗಿ ಆನ್ಲೈನ್ನಲ್ಲಿ ಪ್ರಾಯೋಗಿಕ ಪರೀಕ್ಷೆಯ ಅಂಕಗಳನ್ನು ನಮೂದಿಸಬೇಕು.
Karnataka 2nd PUC Time Table 2021 Preparatory Practical & Final Exam Date know more
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm