ಬ್ರೇಕಿಂಗ್ ನ್ಯೂಸ್
24-04-21 12:01 pm Headline Karnataka News Network ಕರ್ನಾಟಕ
ಬೆಂಗಳೂರು, ಏ.24: ರಾಜ್ಯದಲ್ಲಿ ಪರಿಸ್ಥಿತಿ ಕೈಮೀರಿ ಹೋಗುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಒಂದೇ ದಿನ 124 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.
ಶುಕ್ರವಾರ ವ್ಯಕ್ತಿಯೊಬ್ಬರಿಗೆ ಸೋಂಕು ಹೆಚ್ಚಾಗಿ ಉಸಿರಾಟದ ಸಮಸ್ಯೆಯಿಂದಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಬಂದಿದ್ದರು, ಆದರೆ ಐಸಿಯುನಲ್ಲಿ ಹಾಸಿಗೆ ಖಾಲಿ ಇರಲಿಲ್ಲ.
ಆಸ್ಪತ್ರೆಗಳಲ್ಲಿ 30 ನಿಮಿಷಗಳಷ್ಟು ಕಾದ ಬಳಿಕವೂ ಹಾಸಿಗೆಗಳಿಲ್ಲ, ಬೇರೆ ಆಸ್ಪತ್ರೆಗಳನ್ನು ನೋಡಿಕೊಳ್ಳಿ ಎಂಬ ಉತ್ತರ ಆಸ್ಪತ್ರೆಯಿಂದ ಬಂದಿದೆ. ಬಳಿಕ ಅವರು ಸಾಗರ್ ಅಪೋಲೊ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದ್ದು, ಗುಣಮುಖರಾಗುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಕುಟುಂಬದವರು ಹೇಳಿದ್ದಾರೆ.
ಇದೇ ರೀತಿಯ ಘಟನೆಗಳು ಬಹುತೇಕ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ಸಂಭವಿಸುತ್ತಿದೆ. ಐಸಿಯು ಹಾಗೂ ವೆಂಟಿಲೇಟರ್ಗಾಗಿ ಕಾಯುತ್ತಾ ಸಾಕಷ್ಟು ಮಂದಿ ಸಾವನ್ನಪ್ಪುತ್ತಿದ್ದಾರೆ.
ಬೆಂಗಳೂರಲ್ಲಿ ಕಳೆದ 24 ಗಂಟೆಗಳಲ್ಲಿ 124 ಮಂದಿ ಮೃತಪಟ್ಟಿದ್ದಾರೆ, ಮೊದಲ ಬಾರಿಗೆ 100ಕ್ಕಿಂತ ಹೆಚ್ಚು ಸಾವು ಒಂದೇ ದಿನದಲ್ಲಿ ಸಂಭವಿಸಿದೆ.
ಆರೋಗ್ಯ ಸಿಬ್ಬಂದಿ ಜತೆ ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಶುಕ್ರವಾರ ಮಾತನಾಡಿದ್ದು, ರಾಜ್ಯದ ಪರಿಸ್ಥಿತಿ ಕೈಮೀರುತ್ತಿದೆ ಎಂದಿರುವ ಅವರು 10 ಪಟ್ಟು ಐಸಿಯು ವೆಂಟಿಲೇಟರ್ ಹಾಸಿಗೆಗಳನ್ನು ಸಿದ್ಧಪಡಿಸುವಂತೆ ಸೂಚಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಶುಕ್ರವಾರ ಒಂದೇ ದಿನ ಬೆಂಗಳೂರುನಲ್ಲಿ 124 ಮಂದಿ ಸೇರಿ ರಾಜ್ಯದಲ್ಲಿ ಬರೋಬ್ಬರಿ 190 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 14 ಸಾವಿರ ಗಡಿ ದಾಟಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 26,962 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 12,74,959ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Karnataka Chief Minister BS Yediyurappa, who was discharged from hospital on Thursday, six days after he tested positive for Covid-19, has convened a meeting of ministers to discuss the pandemic situation, which he said had become “uncontrollable”.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm