ಬ್ರೇಕಿಂಗ್ ನ್ಯೂಸ್
25-08-20 09:55 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಕೋಲು ಮಂಡೆ ಜಂಗಮ ದೇವ ಜಾನಪದ ಹಾಡು ತಿರುಚಲಾಗಿದೆ ಹಾಗೂ ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಕನ್ನಡ ರ್ಯಾಪರ್ ಹಾಗೂ ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿ, ಅಶ್ಲೀಲತೆ ಇರುವ ತುಣುಕನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟಿರುವ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನುವ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ ಅಶ್ಲೀಲತೆ ಇರುವ ತುಣುಕನ್ನು ತೆಗೆದು ಮರು ಚಿತ್ರೀಕರಣ ಮಾಡುವುದಾಗಿ ತಿಳಿಸಿದ್ದಾರೆ.
ಗಣೇಶ ಹಬ್ಬದ ಹಿನ್ನೆಲೆ ‘ಕೋಲು ಮಂಡೆ ಜಂಗಮ ದೇವ’ ಎಂಬ ಹೊಸ ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ, ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿತ್ತು.
ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆ.23ರಂದು ಈ ವಿಡಿಯೋ ಬಿಡುಗಡೆಯಾಗಿತ್ತು. ಈಗಾಗಲೇ 36 ಲಕ್ಷಕ್ಕೂ ಅಧಿಕ ಮಂದಿ ಈ ಹಾಡನ್ನು ವೀಕ್ಷಿಸಿದ್ದಾರೆ. ಅಲ್ಲದೇ ಯೂಟ್ಯೂಬ್ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm