ಬ್ರೇಕಿಂಗ್ ನ್ಯೂಸ್
25-08-20 09:55 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 25: ಕೋಲು ಮಂಡೆ ಜಂಗಮ ದೇವ ಜಾನಪದ ಹಾಡು ತಿರುಚಲಾಗಿದೆ ಹಾಗೂ ಹಾಡಿನಲ್ಲಿ ಅಶ್ಲೀಲತೆ ಇದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಕನ್ನಡ ರ್ಯಾಪರ್ ಹಾಗೂ ಬಿಗ್ ಬಾಸ್ ವಿಜೇತ ಚಂದನ್ ಶೆಟ್ಟಿ ಜನತೆಯಲ್ಲಿ ಕ್ಷಮೆ ಕೇಳಿ, ಅಶ್ಲೀಲತೆ ಇರುವ ತುಣುಕನ್ನು ತೆಗೆದು ಹಾಕುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ವಿಡಿಯೋ ಮಾಡಿ ಸ್ಪಷ್ಟನೆ ಕೊಟ್ಟಿರುವ ಚಂದನ್, ಯಾರ ಭಾವನೆಗಳಿಗೂ ಧಕ್ಕೆ ಉಂಟು ಮಾಡಲು ಈ ಹಾಡನ್ನು ಮಾಡಿಲ್ಲ. ಈಗಿನ ಪೀಳಿಗೆಗೆ ನಮ್ಮ ಜಾನಪದ ತಲುಪಲಿ ಅನ್ನುವ ಕಾರಣಕ್ಕೆ ರ್ಯಾಪ್ ಹಾಡಿನ ರೂಪ ಕೊಟ್ಟಿದ್ದೆ. ಇದರಿಂದ ಯಾರಿಗಾದರೂ ಬೇಸರವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ ಅಶ್ಲೀಲತೆ ಇರುವ ತುಣುಕನ್ನು ತೆಗೆದು ಮರು ಚಿತ್ರೀಕರಣ ಮಾಡುವುದಾಗಿ ತಿಳಿಸಿದ್ದಾರೆ.
ಗಣೇಶ ಹಬ್ಬದ ಹಿನ್ನೆಲೆ ‘ಕೋಲು ಮಂಡೆ ಜಂಗಮ ದೇವ’ ಎಂಬ ಹೊಸ ರ್ಯಾಪ್ ಸಾಂಗ್ ಅನ್ನು ಚಂದನ್ ಶೆಟ್ಟಿ ಯೂಟ್ಯೂಬ್ನಲ್ಲಿ ಬಿಡುಗಡೆ ಮಾಡಿದ್ದರು. ಆದರೆ, ಮಾದಪ್ಪನ ಗೀತೆಯನ್ನು ಅಶ್ಲೀಲವಾಗಿ ತೋರಿಸಿರುವ ಆರೋಪ ಚಂದನ್ ಶೆಟ್ಟಿ ವಿರುದ್ಧ ಕೇಳಿಬಂದಿತ್ತು.
ಶಿವಶರಣೆ ಸಂಕಮ್ಮನ ಬಗ್ಗೆ ಅಶ್ಲೀಲ ಪ್ರದರ್ಶಿಸಲಾಗಿದೆ ಮತ್ತು ಭಕ್ತಿ ಗೀತೆಯನ್ನು ತಿರುಚಲಾಗಿದೆ. ಈ ಮೂಲಕ ಮಾದಪ್ಪನ ಭಕ್ತರ ಧಾರ್ಮಿಕ ಮನೋಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆ.23ರಂದು ಈ ವಿಡಿಯೋ ಬಿಡುಗಡೆಯಾಗಿತ್ತು. ಈಗಾಗಲೇ 36 ಲಕ್ಷಕ್ಕೂ ಅಧಿಕ ಮಂದಿ ಈ ಹಾಡನ್ನು ವೀಕ್ಷಿಸಿದ್ದಾರೆ. ಅಲ್ಲದೇ ಯೂಟ್ಯೂಬ್ನಲ್ಲಿ ನಂಬರ್ ಒನ್ ಟ್ರೆಂಡಿಂಗ್ ಆಗಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm