ಬ್ರೇಕಿಂಗ್ ನ್ಯೂಸ್
26-04-21 01:53 pm Headline Karnataka News Network ಕರ್ನಾಟಕ
Photo credits : Prajavaani
ಬೆಂಗಳೂರು,ಏ. 26: ಸಂಪೂರ್ಣ ಹವಾನಿಯಂತ್ರಿತ ಸೌಲಭ್ಯ ಹೊಂದಿರುವ ದೇಶದ ಮೊದಲ ರೈಲು ನಿಲ್ದಾಣ ಎಂಬ ಹಿರಿಮೆಗೆ ಪಾತ್ರವಾಗಿರುವ ನಗರದ ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಒಂದೇ ಮಳೆಗೆ ಅರ್ಧದಷ್ಟು ಮುಳುಗಿ ಹೋಗಿದೆ.
₹314 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಈ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿದೆ. ಆದರೆ, ಕಳೆದ ಶುಕ್ರವಾರ ರಾತ್ರಿ ಸುರಿದ ಮಳೆಗೆ ನಿಲ್ದಾಣದ ಚಾವಣಿಗಳಲ್ಲಿ ನೀರು ಸೋರಿದೆ. ಅಲ್ಲದೆ, ನಿಲ್ದಾಣದೊಳಗೆ ಪ್ಲಾಟ್ಫಾರಂ 1 ಮತ್ತು 7ನ್ನು ಸಂಪರ್ಕಿಸಲು ನಿರ್ಮಿಸಲಾಗಿರುವ ಸುರಂಗ ಮಾರ್ಗದಲ್ಲಿ ಎರಡು ಅಡಿಗಿಂತ ಹೆಚ್ಚು ಎತ್ತರದಲ್ಲಿ ನೀರು ನಿಂತಿದೆ’ ಎಂದು ಸ್ಥಳೀಯರೊಬ್ಬರು ಹೇಳಿದರು.

‘ವಿಶ್ವದರ್ಜೆಯ ನಿಲ್ದಾಣ ಇದಾಗಿರಲಿದೆ ಎಂಬ ಆಶಾಭಾವ ನಮ್ಮದಾಗಿತ್ತು. ಆದರೆ, ಒಂದೇ ಮಳೆಗೆ ನಿಲ್ದಾಣದ ಕಳಪೆ ಗುಣಮಟ್ಟದ ಅನಾವರಣವಾಗಿದೆ‘ ಎಂದರು.
ಸಿಬ್ಬಂದಿ ಕರೆಸಿ ನೀರನ್ನೆಲ್ಲ ಹೊರ ಹಾಕಲಾಗಿದೆ. ನೀರು ಸೋರಿಕೆಗೆ ಕಾರಣ ಏನು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಅಧಿಕಾರಿಯೊಬ್ಬರು ಹೇಳಿದರು.

‘ಚಾವಣಿ ಎಲ್ಲ ಸೋರಿಕೆಯಾಗಿದೆ ಎಂಬುದು ಸುಳ್ಳು. ಸುರಂಗ ಅಥವಾ ಸಬ್ವೇದಲ್ಲಿ ನೀರು ಹರಿದಿದೆ. ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡಲಾಗಿದ್ದು, ಈ ಕಾಮಗಾರಿ ಅಂತಿಮ ಹಂತದಲ್ಲಿದೆ. ಮುಂದೆ ಎಂತಹ ಮಳೆ ಬಂದರೂ ನೀರು ಸರಾಗವಾಗಿ ಹರಿದು ಹೋಗಿ ಸಂಗ್ರಹವಾಗುತ್ತದೆ. ನಿಲ್ದಾಣದಲ್ಲಿ ಮಳೆ ನೀರು ನಿಲ್ಲುವುದಿಲ್ಲ’ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಮಾಧ್ಯಮಗಳಿಗೆ ತಿಳಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm