ಬ್ರೇಕಿಂಗ್ ನ್ಯೂಸ್
02-05-21 11:11 am Headline Karnataka News Network ಕರ್ನಾಟಕ
ಬೀದರ್, ಮೇ 2: ತೀವ್ರ ಕುತೂಹಲ ಕೆರಳಿಸಿರುವ ಬಸವಕಲ್ಯಾಣ ಉಪ ಚುನಾವಣೆ ಮತ ಎಣಿಕೆ ಕಾರ್ಯ ಬೀದರ್ ನಗರದ ಬಿ.ವಿ ಭೂಮರೆಡ್ಡಿ ಕಾಲೇಜು ಮೈದಾನದಲ್ಲಿ ಆರಂಭವಾಗಿದ್ದು, ಡಜನ್ ಅಭ್ಯರ್ಥಿಗಳ ಹಣೆಬರಹ ನಿರ್ಧಾರವಾಗಲಿದೆ.
ತೀವ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದ್ದ ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಬೇಕಿದ್ದು, ಆದರೆ ಮತ ಎಣಿಕೆ ಕಾರ್ಯ ತಾಂತ್ರಿಕ ಕಾರಣದಿಂದ ಇನ್ನೂ ಆರಂಭವಾಗಿಲ್ಲ.
ಕೆಲವು ತಾಂತ್ರಿಕ ತೊಂದರೆಗಳ ಕಾರಣದಿಂದ ಮತ ಏಣಿಕೆ ಕಾರ್ಯ ತಡವಾಗಿದೆ ಎಂದು ಹೇಳಲಾಗಿದೆ. ಸದ್ಯದ ಮಾಹಿತಿ ಪ್ರಕಾರ ಅಂಚೆ ಮತ ಏಣಿಕೆ ಕಾರ್ಯ ಆರಂಭವಾಗಿದೆ.

ಬಸವಕಲ್ಯಾಣ ಉಪ ಚುನಾವಣೆಯ ಮತ ಎಣಿಕೆಯ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಬೀದರ್ ಜಿಲ್ಲಾಧಿಕಾರಿ ರಾಮಚಂದ್ರನ್.ಆರ್ ತಿಳಿಸಿದ್ದಾರೆ.
ಬೀದರ್ ನಗರದ ಬಿ.ವಿ.ಭೂಮರೆಡ್ಡಿ ಕಾಲೇಜಿನಲ್ಲಿ ಮೇ.2ರಂದು ಬೆಳಗ್ಗೆ 8ರಿಂದ ಮೂರು ಕೌಂಟಿಂಗ್ ಕೇಂದ್ರದಲ್ಲಿ ಮತ ಎಣಿಕೆಯು ಆರಂಭವಾಗಲಿದೆ. ಪ್ರತಿ ಕೌಂಟಿಂಗ್ ಕೇಂದ್ರದಲ್ಲಿ ತಲಾ ನಾಲ್ಕು ಟೇಬಲ್ಗಳನ್ನು ಅಳವಡಿಸಲಾಗಿದೆ.
ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲಾಗಿತ್ತು.

ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆ ಮತ ಎಣಿಕೆಯ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ್ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಬಿಜೆಪಿ ಅಭ್ಯರ್ಥಿಗೆ ಮುಂದುವರೆದ ಮುನ್ನಡೆಬಿಜೆಪಿ ಅಭ್ಯರ್ಥಿ ಒಟ್ಟು 6440 ಮತಗಳು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ ಬಿ ನಾರಾಯಣರಾವ್ಗೆ 3188 ಹಾಗೂ ಜೆಡಿಎಸ್ ಅಭ್ಯರ್ಥಿ ಯಾಸ್ರಬ್ ಖಾದ್ರಿಗೆ ಕೇವಲ 549 ಮತಗಳು ಮಾತ್ರ ಲಭಿಸಿವೆ. ಬಿಜೆಪಿ ಅಭ್ಯರ್ಥಿಯ ಒಟ್ಟು ಮುನ್ನಡೆ 3252.

ಬಿಜೆಪಿ ಬಂಡಾಯ ಅಭ್ಯರ್ಥಿ ಖುಬಾಗೆ ಭಾರೀ ಹಿನ್ನೆಡೆಬಸವಕಲ್ಯಾಣ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ವಂಚಿತ ಮಾಜಿ ಶಾಸಕ ಮಲ್ಲಿಕಾರ್ಜುನ ಖುಬಾ ಬಂಡಾಯವಾಗಿ ಸ್ಪರ್ಧಿಸಿ ಸಾಕಷ್ಟು ಪೈಪೋಟಿ ನೀಡಿದರಾದರೂ, ಮತ ಗಳಿಕೆಯಲ್ಲಿ ತೀರಾ ಹಿನ್ನಡೆ ಅನುಭವಿಸುತ್ತಿದ್ದಾರೆ.
ಬಿಜೆಪಿಗೆ ಪ್ರಬಲ ಪೈಪೋಟಿ ನೀಡುವ ನಿರೀಕ್ಷೆ ಹುಟ್ಟಿಸಿದ ಮಲ್ಲಿಕಾರ್ಜುನ ಖುಬಾ ಎರಡು ಸುತ್ತಿನ ಮತ ಎಣಿಕೆಯಲ್ಲಿ ಕೇವಲ 618 ಮತಗಳನ್ನು ಮಾತ್ರ ಪಡೆದಿದ್ದಾರೆ. ಇದು ಮುನ್ನಡೆ ಸಾಧಿಸಿದ ಬಿಜೆಪಿ ಅಭ್ಯರ್ಥಿಗಿಂತ 5822 ಮತಗಳಿಂದ ಹಿಂದೆ ಬಿದ್ದಿದ್ದಾರೆ. ಎರಡು ಬಾರಿ ಬಸವಕಲ್ಯಾಣ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಗೆದ್ದು ಬಂದಿದ್ದರು. ಕಳೆದ ಬಾರಿ ದಿವಂಗತ ಶಾಸಕ ಬಿ.ನಾರಾಯಣರಾವ್ ಎದುರು ಸೋಲನುಭವಿಸಿದರು. ಆದರೆ, ಗಣನೀಯ ಮತಗಳನ್ನು ಪಡೆದಿದ್ದರು.
Karnataka by-elections 2021 Bidar Basavakalyan election result bjp candidate Sharanu Salagar leading
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 04:43 pm
HK News Staffer
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm