ಬ್ರೇಕಿಂಗ್ ನ್ಯೂಸ್
04-05-21 12:37 pm Headline Karnataka News Network ಕರ್ನಾಟಕ
Photo credits : unicef
ಕಲಬುರ್ಗಿ,ಮೇ 04: ಇಲ್ಲಿನ ತಾಲ್ಲೂಕು ಆಸ್ಪತ್ರೆಯಲ್ಲಿ ಸೋಮವಾರ ತಡರಾತ್ರಿ ಆಮ್ಲಜನಕದ ಕೊರತೆಯಿಂದ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ.
ಈ ಆಸ್ಪತ್ರೆಯಲ್ಲಿ ಒಟ್ಟು 30 ರೋಗಿಗಳು ಅಡ್ಮಿಟ್ ಆಗಿದ್ದಾರೆ. ಆದರೆ, ಸೋಮವಾರ ಆರು ಸಿಲಿಂಡರ್ ಮಾತ್ರ ಇದ್ದವು. ಅವುಗಳನ್ನು ಆರು ಮಂದಿಗೆ ನೀಡಲಾಗಿತ್ತು. ಆದರೆ, ಸೋಮವಾರ ತಡರಾತ್ರಿ ಆರೂ ಸಿಲಿಂಡರ್ಗಳು ಖಾಲಿ ಆದ ಕಾರಣ ನಾಲ್ವರು ಬೆಡ್ಗಳ ಮೇಲೆ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ತಾಲ್ಲೂಕು ಆರೋಗ್ಯಾಧಿಕಾರಿಗಳು ಮಂಗಳವಾರ ಬೆಳಿಗ್ಗೆ ಆಮ್ಲಜನಕ ಪೂರೈಸುವಂತೆ ಜಿಲ್ಲಾಧಿಕಾರಿಗೆ ಕರೆ ಮಾಡಿದ್ದಾರೆ. ಬೆಳಿಗ್ಗೆ 11.30ರ ಸುಮಾರಿಗೆ ಆಮ್ಲಜನಕ ಸಿಲಿಂಡರ್ಗಳು ಆಸ್ಪತ್ರೆ ತಲುಪಿದ್ದರಿಂದ ಉಳಿದವರು ನಿಟ್ಟುಸಿರು ಬಿಟ್ಟಿದ್ದಾರೆ.

ಅಫಜಲಪುರ ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ
‘ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಗತ್ಯಕ್ಕೆ ತಕ್ಕಷ್ಟು ಸಿಲಿಂಡರ್ ಗಳು ಇಲ್ಲ. ಖಾಲಿಯಾಗುತ್ತಿದ್ದಂತೆಯೇ ಕಲಬುರ್ಗಿಗೆ ಹೋಗಿ ತುಂಬಿಸಿಕೊಂಡು ಬರುತ್ತಿದ್ದೇವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ’ ಎಂದು ಅಫಜಲಪುರ ಕ್ಷೇತ್ರದ ಶಾಸಕ ಎಂ.ವೈ. ಪಾಟೀಲ ದೂರಿದ್ದಾರೆ.

ಸರ್ಕಾರಕ್ಕೆ ಗಂಭೀರತೆ ಇಲ್ಲ;
ಅಫಜಲಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಫಿಜಿಷಿಯನ್ರೇ ಇಲ್ಲ. ಅಲ್ಲಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುವವರು ಯಾರು’ ಎಂದು ಅವರು ಪ್ರಶ್ನಿಸಿದ್ದಾರೆ.

ಆಮ್ಲಜನಕ ಕೊರತೆ ಇಲ್ಲ: ಸಚಿವ, ಸಂಸದ;
‘ಅಫಜಲಪುರ ಆಸ್ಪತ್ರೆಯಲ್ಲಿ ನಾಲ್ಕು ಆಮ್ಲಜನಕ ಸಿಲಿಂಡರ್ ಇವೆ. ಕೋವಿಡ್ನಿಂದ ಆರೋಗ್ಯ ವಿಷಯಮಿಸಿದ್ದರಿಂದ ಸೋಮವಾರ ಮೂವರು ಹಾಗೂ ಮಂಗಳವಾರ ಒಬ್ಬ ರೋಗಿ ಸತ್ತಿದ್ದಾರೆ. ಆಮ್ಜಜನಕದ ಕೊರತೆಯಿಂದ ಈ ಸಾವು ಸಂಭವಿಸಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
Four Covid-19 patients died of oxygen shortage at the Afzalpur taluk hospital in Kalaburagi district on Monday late at night.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm