ಬ್ರೇಕಿಂಗ್ ನ್ಯೂಸ್
26-08-20 10:42 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಹಣಕಾಸಿನ ತೊಂದರೆಗೆ ಸಿಲುಕಿ ವೃದ್ಧೆಯ ಹತ್ಯೆಗೈದು 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ರಾಯಚೂರು ಜಿಲ್ಲೆಯ ವೀರೇಶ್, ಆತನ ಪತ್ನಿ ಚೈತ್ರಾ ಮತ್ತು ಪ್ರಶಾಂತ್ ಎಂದು ಗುರುತಿಸಲಾಗಿದೆ. ಇದೇ ತಿಂಗಳ ಆ.12ರ ಬೆಳಗ್ಗೆ 10.30ರ ವೇಳೆ ಕಾಡುಗೋಡಿಯ ಚನ್ನಸಂದ್ರದಲ್ಲಿ ಜಯಮ್ಮ(65) ಅವರ ಕೊಲೆ ನಡೆದಿತ್ತು. ಈ ಕೊಲೆಯಿಂದ ಬಡಾವಣೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದರು.
ಆರೋಪಿಗಳು ಕೊಲೆಗೈದು 45 ಲಕ್ಷ ರೂ.ಹಣ, 88 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಾಡುಗೋಡಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆ ಮಾಡಿರುವ ಆರೋಪಿ ವೀರೇಶ್ ಮತ್ತು ಚೈತ್ರಾ ದಂಪತಿ ಕಳೆದ ಎರಡು ವರ್ಷಗಳಿಂದ ಅಪ್ಪಯ್ಯಣ್ಣ, ಜಯಮ್ಮ ಅವರ ಮನೆಯಲ್ಲಿ ಬಾಡಿಗೆಗಿದ್ದರು. ವೀರೇಶ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರೆ ಚೈತ್ರಾ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಬಾಡಿಗೆ ಕಟ್ಟಲಾಗದೇ ಆರ್ಥಿಕ ಸಂಕಷ್ಟದಲ್ಲಿ ಮುಳುಗಿದ್ದು, ದಂಪತಿ ಕಳ್ಳತನ ಮಾಡಲು ನಿರ್ಧರಿಸಿದ್ದರು.
ಅದರಂತೆ ತಮ್ಮದೇ ಗ್ರಾಮದಿಂದ ಪ್ರಶಾಂತ್ ಎಂಬ ಮತ್ತೊಬ್ಬ ಆರೋಪಿಯನ್ನು ಕರೆಸಿಕೊಂಡು ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಹೋರಹೋಗಿದ್ದಾಗ ಜಯಮ್ಮ ಒಬ್ಬಂಟಿಯಾಗಿದ್ದನ್ನು ಗಮನಿಸಿ ಮೂವರು ಮನೆಗೆ ನುಗ್ಗಿ, ಕತ್ತು ಸೀಳಿ ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದರು. ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm