ಬ್ರೇಕಿಂಗ್ ನ್ಯೂಸ್
26-08-20 10:42 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 26: ಹಣಕಾಸಿನ ತೊಂದರೆಗೆ ಸಿಲುಕಿ ವೃದ್ಧೆಯ ಹತ್ಯೆಗೈದು 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿದ್ದ ದಂಪತಿ ಸೇರಿ ಮೂವರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ರಾಯಚೂರು ಜಿಲ್ಲೆಯ ವೀರೇಶ್, ಆತನ ಪತ್ನಿ ಚೈತ್ರಾ ಮತ್ತು ಪ್ರಶಾಂತ್ ಎಂದು ಗುರುತಿಸಲಾಗಿದೆ. ಇದೇ ತಿಂಗಳ ಆ.12ರ ಬೆಳಗ್ಗೆ 10.30ರ ವೇಳೆ ಕಾಡುಗೋಡಿಯ ಚನ್ನಸಂದ್ರದಲ್ಲಿ ಜಯಮ್ಮ(65) ಅವರ ಕೊಲೆ ನಡೆದಿತ್ತು. ಈ ಕೊಲೆಯಿಂದ ಬಡಾವಣೆಯ ಜನರು ತೀವ್ರ ಆತಂಕಕ್ಕೆ ಒಳಗಾಗಿದ್ದರು.
ಆರೋಪಿಗಳು ಕೊಲೆಗೈದು 45 ಲಕ್ಷ ರೂ.ಹಣ, 88 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಕಾಡುಗೋಡಿ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಕೊಲೆ ಮಾಡಿರುವ ಆರೋಪಿ ವೀರೇಶ್ ಮತ್ತು ಚೈತ್ರಾ ದಂಪತಿ ಕಳೆದ ಎರಡು ವರ್ಷಗಳಿಂದ ಅಪ್ಪಯ್ಯಣ್ಣ, ಜಯಮ್ಮ ಅವರ ಮನೆಯಲ್ಲಿ ಬಾಡಿಗೆಗಿದ್ದರು. ವೀರೇಶ್ ಕ್ಯಾಬ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದರೆ ಚೈತ್ರಾ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಲಾಕ್ಡೌನ್ನಿಂದಾಗಿ ಕೆಲಸವಿಲ್ಲದೆ ಬಾಡಿಗೆ ಕಟ್ಟಲಾಗದೇ ಆರ್ಥಿಕ ಸಂಕಷ್ಟದಲ್ಲಿ ಮುಳುಗಿದ್ದು, ದಂಪತಿ ಕಳ್ಳತನ ಮಾಡಲು ನಿರ್ಧರಿಸಿದ್ದರು.
ಅದರಂತೆ ತಮ್ಮದೇ ಗ್ರಾಮದಿಂದ ಪ್ರಶಾಂತ್ ಎಂಬ ಮತ್ತೊಬ್ಬ ಆರೋಪಿಯನ್ನು ಕರೆಸಿಕೊಂಡು ಅಪ್ಪಯ್ಯಣ್ಣ ವಿದ್ಯುತ್ ಬಿಲ್ ಪಾವತಿಸಲು ಹೋರಹೋಗಿದ್ದಾಗ ಜಯಮ್ಮ ಒಬ್ಬಂಟಿಯಾಗಿದ್ದನ್ನು ಗಮನಿಸಿ ಮೂವರು ಮನೆಗೆ ನುಗ್ಗಿ, ಕತ್ತು ಸೀಳಿ ಕೊಲೆ ಮಾಡಿ 45 ಲಕ್ಷ ನಗದು ಹಾಗೂ ಚಿನ್ನಾಭರಣ ಲೂಟಿ ಮಾಡಿ ಪರಾರಿಯಾಗಿದ್ದರು. ಕಾಡುಗೋಡಿ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.
01-11-25 09:33 pm
HK News Desk
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
01-11-25 07:27 pm
HK News Desk
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
01-11-25 11:05 pm
Mangalore Correspondent
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ; ಫೈನಲ್ಸ್ ಮಾತ್ರ ಬ...
01-11-25 10:31 pm
ನೃತ್ಯ ಸಾಧಕಿ ರೆಮೋನಾ, ಶ್ವಾನ ಪ್ರೇಮಿ ರಜನಿ ಶೆಟ್ಟಿ,...
31-10-25 10:47 pm
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm