ಬ್ರೇಕಿಂಗ್ ನ್ಯೂಸ್
30-07-20 10:32 am News Correspondant ಕರ್ನಾಟಕ
ಬೆಂಗಳೂರು(ಜು.30): ನೂತನ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ಎಚ್. ವಿಶ್ವನಾಥ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪರ ಬ್ಯಾಟ್ ಮಾಡಿದರು. ವಿಧಾನಸೌಧದ ಸಮ್ಮೇಳನ ಸಂಭಾಗಣದಲ್ಲಿ ಎಂಎಲ್ಸಿ ಆಗಿ ಪ್ರಮಾನವಚನ ತೆಗೆದುಕೊಂಡ ಬಳಿಕ ಮಾತಾಡಿದ ಎಚ್. ವಿಶ್ವನಾಥ್, ಮಾತಿನ ಮೇಲೆ ನಿಂತ ನಾಯಕ ಬಿ.ಎಸ್ ಯಡಿಯೂರಪ್ಪ. ಯಡಿಯೂರಪ್ಪನವರ ಬೆಂಬಲಕ್ಕೆ ನಾವಿದ್ದೇವೆ ಎಂದರು.
ರಾಜ್ಯ ವಿಧಾನ ಪರಿಷತ್ಗೆ ನಾಮನಿರ್ದೇಶನಕ್ಕೆ ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ. ನಡ್ಡಾ ಮತ್ತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಧನ್ಯವಾದಗಳು. ನಮ್ಮ ಮೇಲೆ ದೊಡ್ಡ ಜವಾಬ್ದಾರಿ ಇದೆ ಎಂದರು ಎಚ್. ವಿಶ್ವನಾಥ್.
ಇನ್ನು, ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದೆ. ಎಲ್ಲ ಜನ ಪ್ರತಿನಿಧಿಗಳು ಕೊರೋನಾ ನಿಯಂತ್ರಿಸಲು ಪ್ರಯತ್ನಿಸುತ್ತಿದ್ದಾರೆ. ನಾವೂ ಇವರೊಂದಿಗೆ ಕೈಜೋಡಿಸಿ ಕೆಲಸ ಮಾಡುತ್ತೇವೆ ಎಂದರು.
ಭಾರತೀಯ ಜನತಾ ಪಕ್ಷದ ಇಡಿ ಕುಟುಂಬ ನಮಗೆ ಆಶೀರ್ವಾದ ಮಾಡಿರುವುದು ಸಂತೋಷವಾಗಿದೆ. ಶಾಂತಾರಾಮ್ ಸಿದ್ದಿ ಅವರು ಬುಡಕಟ್ಟು ಸಮಾಜದ ಅಭಿವೃದ್ಧಿಗೆ ಎಲೆಮರೆ ಕಾಯಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರ ಸಮುದಾಯದ ಮಕ್ಕಳ ಶಿಕ್ಷಣ ಹಾಗೂ ಸಮಾಜದ ಅಭಿವೃದ್ಧಿಗೆ ಸರ್ಕಾರದ ಮಟ್ಟದಿಂದಲೂ ಎಲ್ಲ ಸಹಕಾರ ನೀಡುತ್ತದೆ ಎಂದು ಹೇಳಿದರು.
ಹೀಗೆ ಮುಂದುವರಿದ ಅವರು, ಬಿಜೆಪಿ ಎಲ್ಲ ಜಾತಿ ಜನಾಂಗಕ್ಕೆ ಅವಕಾಶ ನೀಡುತ್ತಿದೆ. ಇದು ಪಕ್ಷದ ಕಾರ್ಯಕರ್ತರಿಗೆ ಉತ್ಸಾಹ ಹೆಚ್ಚಾಗುವಂತೆ ಮಾಡಿದೆ ಎಂದು ತಿಳಿಸಿದರು.
ವಿಧಾನಪರಿಷತ್ಗೆ ರಾಜ್ಯಪಾಲರಿಂದ ನೇರವಾಗಿ ನಾಮನಿರ್ದೇಶನಗೊಂಡಿದ್ದ ಹೆಚ್. ವಿಶ್ವನಾಥ್, ಸಿ.ಪಿ. ಯೋಗೇಶ್ವರ್, ಭಾರತಿ ಶೆಟ್ಟಿ, ಶಾಂತಾರಾಂ ಸಿದ್ದಿ ಮತ್ತು ಸಾಬಣ್ಣ ತಲವಾರ್ ಅವರು ಇಂದು ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪರಿಷತ್ ಸಭಾಪತಿ ಪ್ರತಾಪಚಂದ್ರ ಶೆಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm