ಬ್ರೇಕಿಂಗ್ ನ್ಯೂಸ್
11-05-21 02:51 pm Bangalore Correspondent ಕರ್ನಾಟಕ
Photo credits : ANI @ ANI
ಬೆಂಗಳೂರು, ಮೇ 11: ರಾಂಚಿಯ ಟಾಟಾನಗರದಿಂದ ರಾಜ್ಯಕ್ಕೆ ಆಕ್ಸಿಜನ್ ಕಂಟೇನರ್ಗಳನ್ನು ಹೊತ್ತ ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಇಂದು (ಮಂಗಳವಾರ) ಬೆಂಗಳೂರು ತಲುಪಿದೆ.
ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಆಕ್ಸಿಜನ್ ಪೂರೈಕೆ ಮಾಡಲು "ಆಕ್ಸಿಜನ್ ಎಕ್ಸ್ಪ್ರೆಸ್' ರೈಲು ಸೇವೆಯನ್ನು ಆರಂಭಿಸಿದ್ದು, ಸುಮಾರು 120 ಟನ್ ಆಕ್ಸಿಜನ್ ಹೊತ್ತ "ಆಕ್ಸಿಜನ್ ಎಕ್ಸ್ಪ್ರೆಸ್' ರೈಲು ಜೆಮ್ಶೆಡ್ಪುರ್ನಿಂದ ಸೋಮವಾರ ಹೊರಟಿತ್ತು. ಇಂದು ಬೆಂಗಳೂರಿನ ವೈಟ್ಫೀಲ್ಡ್ಗೆ ಆಗಮಿಸಿದೆ.

ಕರ್ನಾಟಕದಲ್ಲಿ ಸೋಮವಾರ 39,305 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. 24 ಗಂಟೆಯಲ್ಲಿ 596 ಜನರು ಮೃತಪಟ್ಟಿದ್ದಾರೆ. ರಾಜ್ಯದ ದೈನಂದಿನ ಆಕ್ಸಿಜನ್ ಕೋಟಾವನ್ನು 1200 ಟನ್ ಗೆ ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿತ್ತು.
ಗುಜರಾತ್ನಿಂದ ಸೋಮವಾರ ಹೊರಡುವ ಮತ್ತೊಂದು ಆಕ್ಸಿಜನ್ ಎಕ್ಸ್ಪ್ರೆಸ್ ರೈಲು ಮಂಗಳವಾರ ದೆಹಲಿ ತಲುಪಲಿದೆ ಎಂದು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೋಮವಾರವೇ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಎಕ್ಸ್ಪ್ರೆಸ್ ರೈಲಿನ ಮೂಲಕ ಭಾರತೀಯ ರೈಲ್ವೆ ಇದುವರೆಗೂ 4,200 ಮೆಟ್ರಿಕ್ ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್ ಅನ್ನು 268 ಟ್ಯಾಂಕರ್ಗಳ ಮೂಲಕ ದೇಶದ ವಿವಿಧ ರಾಜ್ಯಗಳಿಗೆ ಸಾಗಣೆ ಮಾಡಿದೆ.
ಭಾರತೀಯ ರೈಲ್ವೆ ನೀಡಿರುವ ಮಾಹಿತಿಯಂತೆ 68 ರೈಲುಗಳು ಇದುವರೆಗೂ ಪ್ರಯಾಣವನ್ನು ಪೂರ್ಣಗೊಳಿಸಿವೆ. ಮಹಾರಾಷ್ಟ್ರಕ್ಕೆ 293 ಮೆಟ್ರಿಕ್ ಟನ್, ಉತ್ತರ ಪ್ರದೇಶಕ್ಕೆ 1,230 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.
ಮಧ್ಯಪ್ರದೇಶಕ್ಕೆ 271 ಮೆಟ್ರಿಕ್ ಟನ್, ಹರಿಯಾಣಕ್ಕೆ 555 ಮೆಟ್ರಿಕ್ ಟನ್, ತೆಲಂಗಾಣಕ್ಕೆ 123 ಮೆಟ್ರಿಕ್ ಟನ್, ದೆಹಲಿಗೆ 1679 ಮತ್ತು ತೆಲಂಗಾಣಕ್ಕೆ 40 ಮೆಟ್ರಿಕ್ ಟನ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, 120 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ 6 ಕಂಟೇನರ್ ಗಳು ಬೆಂಗಳೂರಿಗೆ ಬಂದು ತಲುಪಿದೆ. ಕೊರೊನಾ ವಿರುದ್ಧ ಹೋರಾಡಲು ನಿರಂತರವಾಗಿ ಬೆಂಬಲ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರಾದ ಪಿಯೂಶ್ ಗೋಯಲ್, ಡಿ.ವಿ ಸದಾನಂದ ಗೌಡ, ಪ್ರಲ್ಹಾದ್ ಜೋಶಿ ಅವರಿಗೆ ಧನ್ಯವಾದ ಎಂದು ತಿಳಿಸಿದ್ದಾರೆ.
120 MT ಆಮ್ಲಜನಕವನ್ನು ಹೊತ್ತ 6 ಕಂಟೈನರ್ ಗಳ ಆಕ್ಸಿಜನ್ ಎಕ್ಸ್ಪ್ರೆಸ್ ಕರ್ನಾಟಕ ತಲುಪಿದೆ. ಈ ಸಕಾಲಿಕ ನೆರವಿಗಾಗಿ ಕೇಂದ್ರ ಸಚಿವರುಗಳಾದ @DVSadanandGowda, @JoshiPralhad ಮತ್ತು @PiyushGoyal ಅವರಿಗೆ ಹಾಗೂ ನಿರಂತರವಾಗಿ ನಮಗೆ ಬೆಂಬಲವಾಗಿ ನಿಂತಿರುವ ಪ್ರಧಾನಿ ಶ್ರೀ @narendramodi ಜೀ ಅವರಿಗೆ ಧನ್ಯವಾದಗಳು. #Unite2FightCorona pic.twitter.com/G5DPSOOSL7
— CM of Karnataka (@CMofKarnataka) May 11, 2021
The first 'Oxygen Express' to Karnataka with six cryogenic containers -- a total of 120 tonnes -- left Jamshedpur on Monday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm