ಬ್ರೇಕಿಂಗ್ ನ್ಯೂಸ್
11-05-21 07:27 pm Shivamogga Correspondent ಕರ್ನಾಟಕ
ಶಿವಮೊಗ್ಗ, ಮೇ 11; ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ 4 ದಿನ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ" ಎಂದರು.
ಈ ಅವಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ಥಬ್ತವಾಗಲಿದೆ. ಜಿಲ್ಲಾ ಕೈಗಾರಿಕಾ ಸಂಘ, ದಿನಸಿ ಸಗಟು ವ್ಯಾಪಾರಿಗಳ ಸಂಘ, ಗಾಂಧಿ ಬಜಾರ್ ವ್ಯಾಪಾರಿಗಳ ಸಂಘ ಮತ್ತು ಎಪಿಎಂಸಿ ಒಪ್ಪಿಗೆ ನೀಡಿದ್ದು ಸಹಕಾರ ನೀಡಲಿದ್ದಾರೆ" ಎಂದು ತಿಳಿಸಿದರು.
ಈ ಅವಧಿಯಲ್ಲಿ ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ನೆರೆಹೊರೆಯ ಅಗತ್ಯ ವಸ್ತುಗಳ ಅಂಗಡಿಗಳು, ಬ್ಯಾಂಕ್, ಸರ್ಕಾರಿ ಕಚೇರಿ, ಹೊಟೇಲ್ ಪಾರ್ಸೆಲ್ ಸೌಲಭ್ಯ, ಮೆಡಿಕಲ್ ಇತ್ಯಾದಿ ಸೌಲಭ್ಯಗಳಿಗೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು" ಎಂದು ಈಶ್ವರಪ್ಪ ಮನವಿ ಮಾಡಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೊರಬ ಮತ್ತು ಆನವಟ್ಟಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿವೆ. ಶಿವಮೊಗ್ಗ ನಗರದಲ್ಲಿ ಹೊಟೇಲ್ನಲ್ಲಿ ಐಸೋಲೇಶನ್ ಸೌಲಭ್ಯ ಬಯಸುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ" ಎಂದು ವಿವರಣೆ ನೀಡಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಥಂಬ್ ಇಂಪ್ರೆಷನ್ ನೀಡುವ ಮೊದಲು ಸ್ಯಾನಿಟೈಸ್ ಮಾಡಲು ಕಡ್ಡಾಯವಾಗಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ" ಎಂದರು.
Complete 4 days full lockdown to be imposed in Shivamogga from thursday to sunday said district incharge minister Eshwarappa.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 04:21 pm
HK News Staffer
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm