ಬ್ರೇಕಿಂಗ್ ನ್ಯೂಸ್
11-05-21 07:27 pm Shivamogga Correspondent ಕರ್ನಾಟಕ
ಶಿವಮೊಗ್ಗ, ಮೇ 11; ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಗುರುವಾರದಿಂದ ಭಾನುವಾರದ ತನಕ 4 ದಿನ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.
ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಶಿವಮೊಗ್ಗ ನಗರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ತೀವ್ರ ಪ್ರಮಾಣದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಬಿಗಿಗೊಳಿಸಲು ನಿರ್ಧರಿಸಲಾಗಿದೆ" ಎಂದರು.
ಈ ಅವಧಿಯಲ್ಲಿ ಎಲ್ಲಾ ಕೈಗಾರಿಕಾ ಚಟುವಟಿಕೆಗಳು, ಗಾಂಧಿ ಬಜಾರ್, ಸಗಟು ದಿನಸಿ ವ್ಯಾಪಾರ, ಎಪಿಎಂಸಿ ಸಂಪೂರ್ಣವಾಗಿ ಸ್ಥಬ್ತವಾಗಲಿದೆ. ಜಿಲ್ಲಾ ಕೈಗಾರಿಕಾ ಸಂಘ, ದಿನಸಿ ಸಗಟು ವ್ಯಾಪಾರಿಗಳ ಸಂಘ, ಗಾಂಧಿ ಬಜಾರ್ ವ್ಯಾಪಾರಿಗಳ ಸಂಘ ಮತ್ತು ಎಪಿಎಂಸಿ ಒಪ್ಪಿಗೆ ನೀಡಿದ್ದು ಸಹಕಾರ ನೀಡಲಿದ್ದಾರೆ" ಎಂದು ತಿಳಿಸಿದರು.
ಈ ಅವಧಿಯಲ್ಲಿ ಇನ್ನುಳಿದಂತೆ ಸರ್ಕಾರದ ಮಾರ್ಗಸೂಚಿ ಪ್ರಕಾರ ಅಗತ್ಯ ವಸ್ತುಗಳ ಮಾರಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ನೆರೆಹೊರೆಯ ಅಗತ್ಯ ವಸ್ತುಗಳ ಅಂಗಡಿಗಳು, ಬ್ಯಾಂಕ್, ಸರ್ಕಾರಿ ಕಚೇರಿ, ಹೊಟೇಲ್ ಪಾರ್ಸೆಲ್ ಸೌಲಭ್ಯ, ಮೆಡಿಕಲ್ ಇತ್ಯಾದಿ ಸೌಲಭ್ಯಗಳಿಗೆ ತೊಂದರೆಯಿರುವುದಿಲ್ಲ. ಸಾರ್ವಜನಿಕರು ಮನೆಯಲ್ಲಿಯೇ ಇದ್ದು, ಕೊರೊನಾ ನಿಯಂತ್ರಣಕ್ಕೆ ಸಹಕರಿಸಬೇಕು" ಎಂದು ಈಶ್ವರಪ್ಪ ಮನವಿ ಮಾಡಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸೊರಬ ಮತ್ತು ಆನವಟ್ಟಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸೌಲಭ್ಯ ಕಲ್ಪಿಸಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳು ಸಹ ಜಿಲ್ಲಾಡಳಿತದೊಂದಿಗೆ ಸಹಕರಿಸುತ್ತಿವೆ. ಶಿವಮೊಗ್ಗ ನಗರದಲ್ಲಿ ಹೊಟೇಲ್ನಲ್ಲಿ ಐಸೋಲೇಶನ್ ಸೌಲಭ್ಯ ಬಯಸುವ ಕೋವಿಡ್ ಪಾಸಿಟಿವ್ ವ್ಯಕ್ತಿಗಳಿಗಾಗಿ ವ್ಯವಸ್ಥೆ ಮಾಡಲಾಗಿದೆ" ಎಂದು ವಿವರಣೆ ನೀಡಿದರು.
ನ್ಯಾಯಬೆಲೆ ಅಂಗಡಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಮತ್ತು ಪ್ರತಿಯೊಬ್ಬರು ಥಂಬ್ ಇಂಪ್ರೆಷನ್ ನೀಡುವ ಮೊದಲು ಸ್ಯಾನಿಟೈಸ್ ಮಾಡಲು ಕಡ್ಡಾಯವಾಗಿ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಲಾಗಿದೆ" ಎಂದರು.
Complete 4 days full lockdown to be imposed in Shivamogga from thursday to sunday said district incharge minister Eshwarappa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm