ಬ್ರೇಕಿಂಗ್ ನ್ಯೂಸ್
13-05-21 03:29 pm Headline Karnataka News Network ಕರ್ನಾಟಕ
ಚಾಮರಾಜನಗರ, ಮೇ 13: ಆಕ್ಸಿಜನ್ ಕೊರತೆಯಿಂದ 24 ಜನರ ಸಾಮೂಹಿಕ ಸಾವಿಗೆ ಕಾರಣವಾಗಿದ್ದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ ಹನ್ನೊಂದು ಮಂದಿ ಸಾವು ಕಂಡಿದ್ದಾರೆ.
ಈ ಬಗ್ಗೆ ಜಿಲ್ಲಾಸ್ಪತ್ರೆಯಿಂದ ಬುಲೆಟಿನ್ ನೀಡಲಾಗಿದ್ದು ಬುಧವಾರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆ ವರೆಗೆ 11 ಮಂದಿ ಕೊರೊನಾ ಸೋಂಕಿತರು ಸಾವು ಕಂಡಿದ್ದಾಗಿ ಮಾಹಿತಿ ನೀಡಿದ್ದಾರೆ.
24 ಗಂಟೆ ಅವಧಿಯಲ್ಲಿ ಚಾಮರಾಜನಗರ ತಾಲ್ಲೂಕಿನ 9 ಮಂದಿ ಹಾಗೂ ಕೊಳ್ಳೇಗಾಲ ತಾಲ್ಲೂಕಿನ ಇಬ್ಬರು ಸಾವನ್ನಪ್ಪಿದ್ದಾರೆ. ಬುಧವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರ ತನಕ 4 ಮಂದಿ ಸಾವನ್ನಪ್ಪಿದ್ದು, ಸಂಜೆಯಿಂದ ಗುರುವಾರ ಬೆಳಗ್ಗೆ 9 ಗಂಟೆಯ ನಡುವೆ ಮತ್ತೆ 7 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟ 11 ಮಂದಿಯಲ್ಲಿ 7 ಮಂದಿ ಕೋವಿಡ್ ಸೋಂಕಿತರಾಗಿದ್ದರೆ, 4 ಮಂದಿ ಕೋವಿಡ್ ಸೋಂಕಿನ ಲಕ್ಷಣಗಳನ್ನು ಹೊಂದಿದ್ದವರು ಸಾವನ್ನಪ್ಪಿದ್ದಾರೆ.
ತಮಿಳುನಾಡಿಗೆ ಗಡಿಯನ್ನು ಹೊಂದಿಕೊಂಡಿರುವ ಬಹುತೇಕ ಅರಣ್ಯ ಭಾಗವನ್ನು ಹೊಂದಿರುವ ಚಾಮರಾಜನಗರ ಜಿಲ್ಲೆಯಲ್ಲಿ ದಿನವೂ ಸರಾಸರಿ ಹತ್ತು ಮಂದಿ ಸಾಯುತ್ತಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದು ಒಂದು ಕಡೆಯಾದರೆ, ಸಾವಿನ ಪ್ರಮಾಣವೂ ಈ ಭಾಗದಲ್ಲಿ ಹೆಚ್ಚಿರುವುದು ಗ್ರಾಮೀಣ ಭಾಗದ ಜಿಲ್ಲೆಯ ಶೋಚನೀಯ ಸ್ಥಿತಿಯನ್ನು ತೋರಿಸುತ್ತಿದೆ. ತಮಿಳು ಮತ್ತು ಮಲಯಾಳಿ ಭಾಷಿಗರು ಹೆಚ್ಚಿರುವ ಚಾಮರಾಜನಗರ ತಾಲೂಕಿನಲ್ಲೇ ಸೋಂಕು ಹೆಚ್ಚಿರುವುದು ಕಂಡುಬಂದಿದೆ. ವೈದ್ಯಕೀಯ ಚಿಕಿತ್ಸೆಯ ವೈಫಲ್ಯವೋ, ಅಧಿಕಾರಿಗಳ ಅಸಡ್ಡೆಯೋ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಮರಣ ಮೃದಂಗ ಬಾರಿಸುತ್ತಿರುವುದು ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ.
Chamrajnagara reports 11 death of Covid-19 Patients in the last 24 hours resulting in major failure of administration. Recently 24 patients had died of oxygen shortage at the government hospital.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm