ಬ್ರೇಕಿಂಗ್ ನ್ಯೂಸ್
13-05-21 05:28 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 13; ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ದ್ವಿತೀಯ ಪಿಯುಸಿ ಬಳಿಕ ಈಗ ಎಸ್. ಎಸ್. ಎಲ್. ಸಿ. ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಜೂನ್ 21ರಿಂದ ಪರೀಕ್ಷೆಗಳು ನಡೆಯಬೇಕಿತ್ತು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ಈ ಕುರಿತು ಮಾಹಿತಿ ನೀಡಿದ್ದಾರೆ. "ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್. ಎಸ್. ಎಲ್. ಸಿ. ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ" ಎಂದು ಹೇಳಿದ್ದಾರೆ.
"ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ವಿದ್ಯಾರ್ಥಿ, ಪೋಷಕರು, ವಿವಿಧ ಶಾಲಾ ಸಂಘಟನೆಗಳ ಆತಂಕಗಳನ್ನು ಗಮನದಲ್ಲಿರಿಸಿಕೊಂಡು ಈ ನಿರ್ಣಯ ತೆಗೆದುಕೊಳ್ಳಲಾಗಿದೆ. ಕೋವಿಡ್ ಎರಡನೇ ಅಲೆಯ ಪ್ರಸರಣ ಸಂಪೂರ್ಣ ತಹಬಂದಿಗೆ ಬಂದ ಸಂದರ್ಭದಲ್ಲಿ, ಸಾಕಷ್ಟು ಮುಂಚಿತವಾಗಿ ದಿನಾಂಕಗಳನ್ನು ಪ್ರಕಟಿಸಲಾಗುತ್ತದೆ" ಎಂದು ಸಚಿವರು ತಿಳಿಸಿದ್ದಾರೆ.

"ವಿದ್ಯಾರ್ಥಿಗಳು ವಿಚಲಿತರಾಗದೇ ಏಕಾಗ್ರತೆಯಿಂದ ಪರೀಕ್ಷೆಯ ಸಿದ್ಧತೆಯಲ್ಲಿ ತೊಡಗಿಸಿಕೊಳ್ಳಬೇಕು. ಪರೀಕ್ಷೆಯ ಕುರಿತಂತೆ ಯಾವುದೇ ಕಾರಣಕ್ಕೂ ಆತಂಕಕ್ಕೊಳಗುವ ಅವಶ್ಯಕತೆ ಇಲ್ಲ" ಎಂದು ಸಚಿವರು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.
ಎಸ್. ಎಸ್. ಎಲ್. ಸಿ. ಪರೀಕ್ಷೆಯನ್ನು ಜೂನ್ 21ರಿಂದ ಜುಲೈ 5ರ ತನಕ ನಡೆಸಲಾಗುತ್ತದೆ ಎಂದು ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. ಆದರೆ ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ.
ಕರ್ನಾಟಕದಲ್ಲಿ ಕೋವಿಡ್ ಹರಡುವಿಕೆ ತಡೆಯಲು 14 ದಿನಗಳ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಬುಧವಾರ ರಾಜ್ಯದಲ್ಲಿ 39,998 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಒಟ್ಟು ಸೋಂಕಿತರ ಸಂಖ್ಯೆ 2053191ಕ್ಕೆ ಏರಿಕೆಯಾಗಿದೆ.
Amid the ongoing COVID-19 pandemic, the Karnataka Government has decided to postpone SSLC or Class 10 final exams.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm