ಬ್ರೇಕಿಂಗ್ ನ್ಯೂಸ್
17-05-21 12:03 pm Headline Karnataka News Network ಕರ್ನಾಟಕ
ಕಳಸ, ಮೇ 17 : ಕೊರೊನಾ ಸೋಂಕಿತನಾಗಿ, ಮನೆಯ ಜಗುಲಿಯಲ್ಲಿ ಮಲಗಿದ್ದ ಅಣ್ಣನನ್ನು ತಮ್ಮನೇ ಕೊಡಲಿಯಿಂದ ಕೊಚ್ಚಿ ಕೊಲೆಗೈದ ಭೀಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆಯ ಕಂಬಳಗದ್ದೆಯಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿ ಮಹಾವೀರ (45) ಎಂಬಾತನಾಗಿದ್ದು ಆರೋಪಿಯನ್ನು ಪಾರ್ಶ್ವನಾಥ್ ಎಂದು ಗುರುತಿಸಲಾಗಿದೆ. ಮಹಾವೀರನಿಗೆ ಮೂರು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದು ಮೂಡಿಗೆರೆಯ ಎಂಜಿಎಂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಶುಕ್ರವಾರ ಸಂಜೆ ಆಸ್ಪತ್ರೆಯಲ್ಲಿ ನರ್ಸ್ ಮತ್ತು ವೈದ್ಯರೊಂದಿಗೆ ಜಗಳ ಮಾಡಿಕೊಂಡು ಬಂದಿದ್ದ ಮಹಾವೀರ ಮನೆಗೆ ಬಂದು ಹೊರಗಡೆ ಜಗಲಿಯಲ್ಲಿ ಮಲಗಿದ್ದ. ತಮ್ಮ ಮನೆಗೆ ಬಂದಾಗ ಮನೆಯಲ್ಲಿ ಮಹಾವೀರ್ ಇರುವುದನ್ನು ಕಂಡು ಕೊರೊನಾ ಗುಣವಾಗದೆ ಯಾಕೆ ಮನೆಗೆ ಬಂದೆ ಎಂದು ಪಾರ್ಶ್ವನಾಥ್ ಪ್ರಶ್ನೆ ಮಾಡಿದ್ದಾನೆ.




ಕೊರೊನಾ ಗುಣವಾಗದೆ ಮನೆಗೆ ಬಂದಿದ್ದ ವಿಚಾರಕ್ಕೆ ಜಗಳ ನಡೆದು ಆಸ್ತಿ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಅಣ್ಣನನ್ನು ಸ್ವತಃ ತಮ್ಮನೇ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಯನ್ನು ಕಾಲಿನಿಂದ ಒತ್ತಿ ತಲೆ ಮತ್ತು ಮುಖವನ್ನು ಕತ್ತಿಯಿಂದ ಕೊಚ್ಚಿದ್ದಾನೆ. ಮನೆ ಮಂದಿ ಕತ್ತಿಯನ್ನು ಕಸಿದುಕೊಂಡಿದ್ದು ಅಲ್ಲಿಗೇ ಬಿಡದ ಪಾರ್ಶ್ವನಾಥ ಸೌದೆ ಕೊಟ್ಟಿಗೆಯಲ್ಲಿದ್ದ ಕೊಡಲಿಯನ್ನು ತಂದು ಅಣ್ಣನನ್ನೇ ಒಂದೇ ಏಟಿಗೆ ಕೊಚ್ಚಿ ಕೊಲೆ ಮಾಡುವ ಮೂಲಕ ಕೌರ್ಯ ಮೆರೆದಿದ್ದಾನೆ.
ತೀವ್ರವಾಗಿ ಗಾಯಗೊಂಡ ಮಹಾವೀರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
Younger Brother kills own Eleder Brother who was covid positive for getting discharged from hospital without complete healing form Covid in Kalasa.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm