ಬ್ರೇಕಿಂಗ್ ನ್ಯೂಸ್
17-05-21 12:31 pm Headline Karnataka News Network ಕರ್ನಾಟಕ
Photo credits : one india kannada
ಕೋಲಾರ, ಮೇ 17 : ಕೊರೊನಾ ಲಾಕ್ಡೌನ್ ಡಬಲ್ ಧಮಾಕಾ ಎಂದು ಅಕ್ಕ - ತಂಗಿಯನ್ನು ಮದುವೆಯಾಗಿ ಸುದ್ದಿಯಾಗಿದ್ದ ಮದುಮಗನನ್ನು ಪೊಲೀಸರು ಬಂಧಿಸಿದ್ದಾರೆ. ವಿವಾಹಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ವೇಗಮಡುಗು ನಿವಾಸಿ ಉಮಾಪತಿ ಎಂಬಾತ ಸುಪ್ರಿಯಾ ಮತ್ತು ಲಲಿತಾ ಎಂಬ ಅಕ್ಕ ತಂಗಿಯರನ್ನು ಮೇ 7ರಂದು ಒಂದೇ ಮುಹೂರ್ತದಲ್ಲಿ ವಿವಾಹವಾಗಿದ್ದು ಭಾರೀ ಸುದ್ದಿಯಾಗಿತ್ತು. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್ ಆಗುತ್ತಿದ್ದಂತೆ ಅನುಮಾನಗೊಂಡ ಕೋಲಾರ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅಧಿಕಾರಿಗಳಿಗೆ ಪರಿಶೀಲನೆ ನಡೆಸುವಂತೆ ಸೂಚಿಸಿದ್ದರು. ಪರಿಶೀಲನೆ ವೇಳೆ ತಂಗಿ ಅಪ್ರಾಪ್ತ ವಯಸ್ಕಳಾಗಿದ್ದು ತಿಳಿದುಬಂದಿದ್ದು ಮದುಮಗ ಉಮಾಪತಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.
ಹೆಣ್ಮಕ್ಕಳ ಪೋಷಕರ ಒಪ್ಪಿಗೆಯಲ್ಲೇ ಮದುವೆ ನಡೆದಿತ್ತು. ಹೀಗಾಗಿ ಪೋಷಕರ ವಿರುದ್ಧವೂ ಪ್ರಕರಣ ದಾಖಲಾಗಿದ್ದು ಅವರು ತಲೆಮರೆಸಿಕೊಂಡಿದ್ದಾರೆ. ಉಮಾಪತಿ, ಗ್ರಾಮಸ್ಥರು ಮತ್ತು ಹಿರಿಯರ ಸಮ್ಮುಖದಲ್ಲಿಯೇ ಮೇ 7ರಂದು ಅಕ್ಕ ತಂಗಿಯರನ್ನು ವಿವಾಹವಾಗಿದ್ದ. ಲಾಕ್ಡೌನ್ ಸಮಯದಲ್ಲಿ ಒಂದಕ್ಕೆ ಒಂದು ಉಚಿತ ಎನ್ನುವ ರೀತಿ ಸುದ್ದಿ ವೈರಲ್ ಆಗಿ ಭಾರೀ ಚರ್ಚೆಗೀಡಾಗಿತ್ತು. ಇದೀಗ ಡಬಲ್ ಲಾಭದ ಮದುವೆಯೇ ಆತನಿಗೆ ಉರುಳಾಗಿದ್ದು ಕಂಬಿ ಎಣಿಸುವಂತಾಗಿದೆ.
The woman who was to marry Umapathy had told him that she would tie the knot with him only if he married her speech-impaired sister too. And so Umapathy, married both in the same Muhurat in Kurudumale temple of Kolar district recently. His troubles had only just begun.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm