ಬ್ರೇಕಿಂಗ್ ನ್ಯೂಸ್
27-08-20 11:35 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 27: ತುಳು ಭಾಷೆಗೆ ರಾಜ್ಯದ ಅಧಿಕೃತ ಭಾಷೆಯಾಗಿ ಮನ್ನಣೆ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಕರಾವಳಿಯ ಶಾಸಕರು ಮನವಿ ಸಲ್ಲಿಸಿದ್ದಾರೆ.
ನಮ್ಮ ದೇಶದಲ್ಲಿನ ಬಹುತೇಕ ರಾಜ್ಯಗಳಲ್ಲಿ ತಮ್ಮ ತಮ್ಮ ರಾಜ್ಯದಲ್ಲಿನ ಉತ್ತಮ ಸಾಂಸ್ಕೃತಿಕ ಹಿನ್ನೆಲೆಯುಳ್ಳ ಭಾಷೆಗಳನ್ನು ರಾಜ್ಯದ ಅದಿಕೃತ ಭಾಷೆಯನ್ನಾಗಿ ಸಂವಿಧಾನದ ಆರ್ಟಿಕಲ್ 345- ಬಿ ಪ್ರಕಾರ ಘೋಷಿಸಿಕೊಂಡಿದೆ. ಕಳೆದ 2011ನೇ ಜನಗಣತಿ ಪ್ರಕಾರ ಸುಮಾರು18.05 ಲಕ್ಷ ಜನರು ಅಧಿಕೃತವಾಗಿ ತುಳು ಭಾಷೆಯನ್ನು ಮಾತನಾಡುತ್ತಾರೆ.
ಕರ್ನಾಟಕ ತುಳು ಆಕಾಡೆಮಿ ಹಾಗೂ ತುಳು ಸಂಘ ಸಂಸ್ಥೆಗಳ ಪ್ರಕಾರ ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಸರಿ ಸುಮಾರು 40 ಲಕ್ಷಕ್ಕೂ ಅಧಿಕ ತುಳು ಭಾಷಿಕರಿದ್ದು ರಾಷ್ಟ್ರೀಯ ಮತ್ತು ಜಾಗತಿಕ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸುಮಾರು ಒಂದುವರೆ ಕೋಟಿಗಿಂತಲೂ ಅಧಿಕ ತುಳು ಭಾಷಿಕರಿರುವುದನ್ನು ಗುರುತಿಸಲಾಗಿರುತ್ತದೆ.
ತಮ್ಮ ಅವಗಾಹಣೆಗಾಗಿ ಸಲ್ಲಿಸಿರುವ ಮಾಹಿತಿಗಳನ್ನು ಅವಲೋಕಿಸಿ ಸಕಾಲದಲ್ಲಿ ತುಳು ಭಾಷೆಯನ್ನು ಕರ್ನಾಟಕದ ಅಧಿಕೃತ ಭಾಷೆ ಎಂದು ಸಂವಿಧಾನದ ಆರ್ಟಿಕಲ್ 345 ರ ಪ್ರಕಾರ ಘೋಷಿಸಲು ರಾಜ್ಯ ಸರ್ಕಾರ ಅನುಸರಿಸಬೇಕಾದ ಮತ್ತು ಈಗಾಗಲೇ ಕೈಗೊಂಡ ಕ್ರಮಗಳೊಂದಿಗೆ ಸಾಂವಿಧಾನಿಕ ನೀತಿ ನಿಯಮಗಳ ವ್ಯಾಪ್ತಿಯಲ್ಲಿ ಕೇಂದ್ರ ಸರ್ಕಾರ ಅನುಮೋದನೆ ನೀಡುವಂತೆ ಆಗ್ರಹಿಸಬೇಕು. ಈ ಮೂಲಕ ತುಳುನಾಡಿನ ಸಮಸ್ತರ ದೀರ್ಘಕಾಲದ ಬೇಡಿಕೆಯನ್ನು ಈಡೇರಿಸಬೇಕೆಂದು ಕರಾವಳಿ ಜಿಲ್ಲೆಯ ಶಾಸಕರು ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದಾರೆ.
ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕುರಿತಾದ ಸಾಂವಿಧಾನಿಕ ಕಾನೂನುಗಳ ಪ್ರಕಾರ ಪ್ರಸ್ತಾವನೆ ಮಂಡಿಸಿ ಅನುಮೋದನೆಯನ್ನು ಪಡೆದು ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ಮತ್ತು ಅಲ್ಲಿಂದ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಾಗಿ ಸಿಎಂ ಯಡಿಯೂರಪ್ಪ ಅವರನ್ನು ಕರಾವಳಿಯ ಶಾಸಕರು ವಿನಂತಿಸಿದ್ದಾರೆ.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಮಂಗಳೂರು ಉತ್ತರ ಶಾಸಕರಾದ ಡಾ.ಭರತ್ ಶೆಟ್ಟಿ, ಪುತ್ತೂರು ಶಾಸಕರಾದ ಸಂಜೀವ ಮಟಂದೂರು, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಹಾಗೂ ಶಾಂತಾರಾಮ ಸಿದ್ದಿ ಉಪಸ್ಥಿತರಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm