ಬ್ರೇಕಿಂಗ್ ನ್ಯೂಸ್
19-05-21 12:42 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 19: ಲಾಕ್ಡೌನ್ ಸಂಕಷ್ಟಕ್ಕೆ ಸಿಲುಕಿರುವ ಶ್ರಮಿಕ ವರ್ಗಕ್ಕೆ ಸರಕಾರ ಘೋಷಣೆ ಮಾಡಿರುವ ನೆರವಿನ ಪ್ಯಾಕೇಜ್ ಬಗ್ಗೆ ಕಾಂಗ್ರೆಸ್ ಮತ್ತು ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿವೆ.
ಯಾವುದೇ ಪೂರ್ವ ಯೋಜನೆ ಇಲ್ಲದೆ ತರಾತುರಿಯಲ್ಲಿ ಪರಿಹಾರ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಎಷ್ಟು ಮಂದಿಗೆ ಎಷ್ಟೆಲ್ಲಾ ನಷ್ಟ ಆಗಿದೆ ಎನ್ನುವ ಬಗ್ಗೆ ಮಾಹಿತಿಯನ್ನೇ ಪಡೆಯದೆ ಜುಜುಬಿ ಪರಿಹಾರ ಘೋಷಣೆ ಮಾಡಿದ್ದಾರೆ. ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡೋಕೂ ಮುನ್ನ ಅಧ್ಯಯನ ನಡೆಸಬೇಕಿತ್ತು. ತೋರಿಕೆಗೆ ಪ್ಯಾಕೇಜ್ ಘೋಷಣೆ ಮಾಡಬಾರದು. ಸರಕಾರ ಭಿಕ್ಷೆ ನೀಡುವುದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟೀಕಿಸಿದ್ದಾರೆ. ಕಳೆದ ಬಾರಿ ಮಾಡಿದ್ದ ಘೋಷಣೆಯೇ ಜನರಿಗೆ ತಲುಪಿಲ್ಲ. ಯಾರಿಗೆ ಎಷ್ಟು ಕೊಟ್ಟಿದ್ದೀರಿ ಎಂದು ಲೆಕ್ಕ ಕೊಡಿ. ಹೂವು ಬೆಳಗಾರರಿಗೆ ಕಳೆದ ಬಾರಿ ಹೆಕ್ಟೇರ್ ಗೆ 25 ಸಾವಿರ ರೂ.ನಂತೆ ಕೊಡುವುದಾಗಿ ಹೇಳಿದ್ದಿರಿ. ಎಷ್ಟು ಮಂದಿಗೆ ಸಿಕ್ಕಿದೆ, ಲೆಕ್ಕ ಕೊಡಿ. ಸರಕಾರದ ಆರ್ಥಿಕ ಪ್ಯಾಕೇಜ್ ಬರೀಯ ಬೋಗಸ್ ಎಂದು ಡಿಕೆಶಿ ಟೀಕಿಸಿದ್ದಾರೆ.


ಬಡವನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ !
ಸರಕಾರದ ಆರ್ಥಿಕ ಪ್ಯಾಕೇಜ್ ಬಡವರ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಅಷ್ಟೇ ಎಂದು ಜೆಡಿಎಸ್ ನಾಯಕ ಕುಮಾರಸ್ವಾಮಿ ಟೀಕಿಸಿದ್ದಾರೆ. ಇವರಿಗೆ ಬಡವರ ಬಗ್ಗೆ ಕಾಳಜಿ ಇರುತ್ತಿದ್ದರೆ ಈ ರೀತಿ ಜುಜುಬಿ ಪರಿಹಾರ ಘೋಷಣೆ ಮಾಡುತ್ತಿರಲಿಲ್ಲ. ಎರಡು ಸಾವಿರ, ಮೂರು ಸಾವಿರದಲ್ಲಿ ಜೀವನ ನಡೆಯುತ್ತಾ.. ಇವರಿಗೆ ಕನಿಷ್ಠ ಮಾಹಿತಿ ಇದ್ಯಾ.. ದಿನಕೂಲಿ ಮಾಡೋ ಮಂದಿಯ ಬಗ್ಗೆ ಇವರಿಗೆ ಮಾಹಿತಿಯೇ ಇಲ್ಲ.. ರಾಜ್ಯದ ಜನರ ಬಗ್ಗೆ ಸರಿಯಾದ ಮಾಹಿತಿಯೇ ಇವರ ಬಳಿ ಇಲ್ಲ. ಏನೋ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಒಂದಷ್ಟು ಘೋಷಣೆ ಮಾಡಿದ್ದಾರೆ. ಸರಕಾರದ ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ನಾನು ಕೂಡ ಸರಕಾರ ನಡೆಸಿದವನು. ಹಾಗೆ ನೋಡಿದರೆ ಕಳೆದ ಬಾರಿ ದೊಡ್ಡ ಕಷ್ಟವಾಗಿತ್ತು. ಈ ಬಾರಿ ಅಂಥ ಸ್ಥಿತಿ ಇಲ್ಲ. ಸರಕಾರ ಹೇಗೆ ನಡೆಸಬೇಕು, ಆರ್ಥಿಕ ಪರಿಸ್ಥಿತಿ ಹೇಗಿದೆ ಎನ್ನೋದು ಗೊತ್ತು. ಇವರು ಜುಜುಬಿ ಪರಿಹಾರ ನೀಡಿ ದುಡಿಯುವ ಜನರನ್ನು ಅಣಕಿಸಿದ್ದಾರೆ ಎಂದು ಕಟುವಾಗಿ ಟೀಕೆ ಮಾಡಿದ್ದಾರೆ.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm