ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.

ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.

ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm