ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.

ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.

ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm