ಬ್ರೇಕಿಂಗ್ ನ್ಯೂಸ್
24-05-21 11:27 am Headline Karnataka News Network ಕರ್ನಾಟಕ
ಬಾಗಲಕೋಟೆ, ಮೇ 24 : ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ಅಟ್ಟಹಾಸದ ಭೀತಿ ಮೂಡಿಸುತ್ತಿದ್ದರೆ, ಲಸಿಕೆಗೆ ಒಂದೇ ಬಾರಿಗೆ ಬೇಡಿಕೆ ಕಾಣಿಸಿಕೊಂಡು ಲಸಿಕೆಯೇ ಇಲ್ಲದಾಗಿದೆ. ಇಂಥ ಸಂದರ್ಭದಲ್ಲೇ ಈಗಾಗ್ಲೇ ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ಪ್ರಮಾಣ ಮತ್ತು ಸಾವು ಸಂಭವಿಸುತ್ತಿರುವ ಪ್ರಮಾಣದ ವಿಚಾರದಲ್ಲಿ ತಜ್ಞರು ಅಧ್ಯಯನ ನಡೆಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಸಿಟಿ ಸ್ಕ್ಯಾನ್ ವೈದ್ಯರು ಸೇರಿ ನಡೆಸಿದ ಅಧ್ಯಯನದಲ್ಲಿ ಲಸಿಕೆ ಪಡೆದವರಲ್ಲಿ ಸಾವಿನ ಪ್ರಮಾಣ ಅತ್ಯಂತ ಕಡಿಮೆ. ಅಷ್ಟೇ ಅಲ್ಲ, ಲಸಿಕೆ ಪಡೆದವರ ಜೀವ ಬಹುತೇಕ ಸೇಫ್ ಎನ್ನುವ ವಿಚಾರವನ್ನು ವೈದ್ಯರು ಕಂಡುಕೊಂಡಿದ್ದಾರೆ.
ಎರಡನೇ ಅಲೆಯಲ್ಲಿ ಕೊರೊನಾ ಪತ್ತೆಗಾಗಿ ಸಿಟಿ ಸ್ಕ್ಯಾನ್ ಮಾಡಿಸಿದ ಸೋಂಕಿತರ ಮಾಹಿತಿ ಸಂಗ್ರಹಿಸಿ, ತಾಳೆಹಾಕಿ ನೋಡಿದಾಗ ಈ ವಿಚಾರ ಕಂಡುಬಂದಿದೆ.

ಸಿಟಿ ಸ್ಕ್ಯಾನ್ ಮಾಡಿಸಿದ ಒಂದು ಸಾವಿರ ಜನರ ಮಾಹಿತಿ ಪಡೆದು, ಅವರಲ್ಲಿ ಸೋಂಕಿನ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಿದ್ದಾರೆ. ಒಂದು ಸಾವಿರ ಜನರಲ್ಲಿ ಸೋಂಕು ಕಾಣಿಸಿದ್ದ ಶೇ. 75 ಜನರು ವ್ಯಾಕ್ಸಿನ್ ಹಾಕಿಸಿಕೊಂಡಿರಲಿಲ್ಲ. ಅಲ್ಲದೆ, ಸೋಂಕು ಕಾಣಿಸಿದ ಶೇ.25 ಜನರು ಸಿಂಗಲ್ ಡೋಸ್ ಪಡೆದಿದ್ದರು. ಎರಡು ಡೋಸ್ ಪಡೆದವರ ಪೈಕಿ ಶೇ.5ರಷ್ಟು ಜನರಲ್ಲಿ ಮಾತ್ರ ಸೋಂಕು ಬಂದಿರುವುದು ಕಂಡುಬಂದಿದೆ.
ಇದಲ್ಲದೆ, ಎರಡು ಡೋಸ್ ಪಡೆದ ಸೋಂಕಿತರಲ್ಲಿ ಲಂಗ್ಸ್ ಡ್ಯಾಮೇಜ್ ತೀರಾ ಕಡಿಮೆ ಇರುವುದು ಕಂಡುಬಂದಿದೆ. ಎರಡು ಡೋಜ್ ಲಸಿಕೆ ಪಡೆದವರಲ್ಲಿ ಕೆಲವರಲ್ಲಿ ಸೋಂಕು ಕಾಣಿಸಿದರೂ ಸಾವು ತಡೆದಿದೆ ಎನ್ನುವ ಅಂಶ ಅಧ್ಯಯನದಲ್ಲಿ ಹೊರಬಿದ್ದಿದೆ.

ಹಾಗಾಗಿ, ವ್ಯಾಕ್ಸಿನ್ ಪಡೆದವರ ಜೀವ ಸೇಫ್ ಎನ್ನುವುದು ಅಧ್ಯಯನದಲ್ಲಿ ಸಾಬೀತಾಗಿದೆ. ಯಾವುದೇ ಅಪಪ್ರಚಾರಕ್ಕೆ ಕಿವಿಗೊಡದೆ ಜನರು ಲಸಿಕೆ ಪಡೆಯಬೇಕು ಎಂದು ಹೇಳಿದ್ದಾರೆ ತಜ್ಞರು.
ಈ ಬಾರಿ ಫ್ರಂಟ್ ಲೈನ್ ವಾರಿಯರ್ ಗಳು ಎರಡು ಡೋಜ್ ಪಡೆದ ಪರಿಣಾಮವೇ ಎರಡನೇ ಅಲೆಯ ಸಾವಿನ ಡಂಗುರದ ನಡುವೆಯೂ ಸೇಫ್ ಆಗಿದ್ದಾರೆ. ಕೊರೊನಾಗೆ ಬಲಿಯಾದ ಬಹುತೇಕರು ಲಸಿಕೆ ಪಡೆದಿಲ್ಲ ಎನ್ನುವುದು ಅನೇಕ ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಿರುವ ವೈದ್ಯರು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ ಲಸಿಕೆ ಪಡೆದು ಜೀವ ಉಳಿಸಿಕೊಳ್ಳಿ ಎಂದು ವೈದ್ಯರು ಕರೆ ನೀಡಿದ್ದಾರೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am