ಬ್ರೇಕಿಂಗ್ ನ್ಯೂಸ್
28-08-20 05:36 pm Dhruthi Anchan - Correspondant ಕರ್ನಾಟಕ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮಹಿಳೆಯರಿಗಾಗಿಯೇ ಸಿದ್ದಪಡಿಸಿದ ರಾಜ್ಯದ ಮೊದಲ ಹೈಟೆಕ್ ಸ್ತ್ರೀ ಶೌಚಾಲಯ ಇಂದು ಲೋಕಾರ್ಪಣೆಯಾಗಿದೆ. ಬಸ್ ಶೌಚಾಲಯವನ್ನು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅನಾವರಣಗೊಳಿಸಿದರು. ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ಇತರೆ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ವತಿಯಿಂದ ಸಾಮಾಜಿಕ ಕಳಕಳಿ ( CSR ) ಯೋಜನೆಯಡಿ ಈ ಶೌಚಗೃಹದ ನಿರ್ಮಾಣದ ವೆಚ್ಚವನ್ನು ಭರಿಸಲಾಗಿದೆ.

ನಿಗಮದ ಮುಖ್ಯ ಕಾಳಜಿ ಮಹಿಳಾ ಸ್ವಾಸ್ಥ್ಯ ಸಮಾಜವಾಗಿದ್ದು ಆ ಹಿನ್ನೆಲೆಯಲ್ಲಿ ದೇಶದ ರಸ್ತೆ ಸಾರಿಗೆ ನಿಗಮದಲ್ಲಿಯೇ ಪ್ರಪ್ರಥಮ ಬಾರಿಗೆ ಇಂತಹ ಸುಸಜ್ಜಿತ ಶೌಚಾಲಯವನ್ನು ಅನುಪಯುಕ್ತ ಬಸ್ಸಿನಲ್ಲಿ ನಿರ್ಮಿಸಲಾಗಿದೆ. ನಿಗಮವು ಹಲವು ಮಹಿಳಾ ಸ್ನೇಹಿ ಉಪಕ್ರಮಗಳನ್ನು ಜಾರಿಗೆ ತಂದಿದ್ದು, ಬಸ್ ನಿಲ್ದಾಣ ಹಾಗೂ ಬಸ್ಸುಗಳನ್ನು ಮಹಿಳಾ ಸ್ನೇಹಿಯಾಗಿಸುವ ನಿಟ್ಟಿನಲ್ಲಿನ ಈ ಪ್ರಯತ್ನ ಮಾಡಲಾಗಿದೆ.
ಈ ಶೌಚಾಲಯದಲ್ಲಿ ಮಗುವಿಗೆ ಹಾಲುಣಿಸುವ ಸ್ಥಳ, ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರ, ಇನ್ಸಿನೇರೇಟರ್, ಮಕ್ಕಳ ಡೈಪರ್ ಬದಲಿಸುವ ಸ್ಥಳ, ವಾಷ್ ಬೇಸಿನ್ಗಳು, ಸೆನ್ಸಾರ್ ದೀಪಗಳು, ಸೋಲಾರ್ ವಿದ್ಯುತ್ ದ್ವೀಪಗಳನ್ನ ಅಳವಡಿಸಲಾಗಿದೆ.
ಸ್ವಚ್ಛ ಹಾಗೂ ಆರೋಗ್ಯಕರ ಪರಿಸರ ನಿಗಮದ ಪ್ರಥಮ ಆದ್ಯತೆಯಾಗಿದ್ದು, ಕೊರೊನಾದ ಈ ಸಂದರ್ಭದಲ್ಲಿ, ಈ ಸ್ವಚ್ಛ ಹಾಗೂ ಸುಸಜ್ಜಿತ ಶೌಚಾಲಯ ಮಾದರಿಯಾಗಲಿದೆ. ಸ್ವಚ್ಛ ಭಾರತದ ಪರಿಕಲ್ಪನೆಯನ್ನು ಸಾಕಾರ ಮಾಡುವ ನಿಟ್ಟಿನಲ್ಲಿ ಕೆ ಎಸ್ಆರ್ಟಿಸಿಯ ಪ್ರಯತ್ನ ಶ್ಲಾಘನೀಯ ಎಂದು ಸನ್ಮಾನ್ಯ ಉಪ ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಹಾಗೂ ಇದೇ ರೀತಿಯಲ್ಲಿ ಅನುಪಯುಕ್ತ ಬಸ್ಗಳನ್ನ ವಿವಿಧ ಯೋಜನೆಗಳಿಗೆ ಉಪಯೋಗಿಸಲು ಸಲಹೆ ನೀಡಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm