ಬ್ರೇಕಿಂಗ್ ನ್ಯೂಸ್
25-05-21 02:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಡಿಯಲ್ಲಿರೋದು ನಾನೇ.. ಯುವತಿಯ ಜೊತೆ ಸಹಮತದಿಂದಲೇ ಲೈಂಗಿಕ ಸಂಪರ್ಕ ನಡೆಸಿದ್ದೆ ಎಂದು ಹೇಳುವ ಮೂಲಕ ಜಾರಕಿಹೊಳಿ ಇಡೀ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿದ್ದಾರೆ.
ಕೆಲಸದ ಆಮಿಷವೊಡ್ಡಿ ಸಚಿವರು ನನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆಯ ದೂರಿನಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಆಗಿರುವ ಎಂ.ಸಿ.ಕವಿತಾ ಎದುರು ವಿಚಾರಣೆಗೆ ಹಾಜರಾಗಿದ್ದ ರಮೇಶ ಜಾರಕಿಹೊಳಿ, ನಾಲ್ಕು ಪುಟಗಳ ಹೇಳಿಕೆ ನೀಡಿದ್ದಾರೆ. ವೈದ್ಯಕೀಯ ಪರೀಕ್ಷೆಗೂ ಒಳಪಟ್ಟಿದ್ದಾರೆ.
ನೀರಾವರಿ ಸಚಿವನಾಗಿದ್ದ ಸಂದರ್ಭದಲ್ಲಿ ಜಲಾಶಯಗಳ ವಿಡಿಯೊ ಚಿತ್ರೀಕರಣ ಮಾಡಲೆಂದು ಯುವತಿಯೇ ನನ್ನನ್ನು ಸಂಪರ್ಕಿಸಿದ್ದಳು. ನನ್ನ ಮೊಬೈಲ್ ನಂಬರ್ ಪಡೆದು ಮಾತನಾಡಲಾರಂಭಿಸಿದ್ದಳು. ಉತ್ತರ ಕರ್ನಾಟಕದವಳು ಎಂದು ಹೇಳಿದ್ದಕ್ಕೆ ನಾನೂ ಮಾತನಾಡುತ್ತಿದ್ದೆ ಎಂದು ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಪ್ರತಿ ಬಾರಿ ಕರೆ ಮಾಡಿದಾಗಲೂ ಯುವತಿ ಲೈಂಗಿಕ ವಿಚಾರದಲ್ಲಿ ಪ್ರಚೋದಿಸುತ್ತಿದ್ದಳು. ಆಕೆಯ ಮಾತಿನಿಂದ ಪ್ರಭಾವಿತನಾಗಿ ಸಲುಗೆಯಿಂದ ಮಾತನಾಡುತ್ತಿದ್ದೆ. ಕೆಲವೊಮ್ಮೆ ಯುವತಿಯೇ ನಗ್ನವಾಗಿ ವಿಡಿಯೋ ಕರೆ ಮಾಡಿ ಅಂಗಾಂಗ ತೋರಿಸುತ್ತಿದ್ದಳು. ಅದರಿಂದಲೂ ನಾನು ಪ್ರಚೋದನೆಗೊಂಡಿದ್ದೆ. ಬಳಿಕ ನನ್ನನ್ನು ಭೇಟಿಯಾಗಬೇಕೆಂದು ಮಲ್ಲೇಶ್ವರದಲ್ಲಿರುವ ಅಪಾರ್ಟ್ಮೆಂಟ್ ಸಮುಚ್ಚಯದ ಫ್ಲ್ಯಾಟ್ಗೆ ಬಂದಿದ್ದಳು. ಅದೇ ಸಂದರ್ಭದಲ್ಲಿ ಆಕೆಯೇ ನನ್ನ ಜೊತೆಗೆ ಲೈಂಗಿಕ ಸಂಪರ್ಕ ನಡೆಸಲು ಒಪ್ಪಿದ್ದಳು. ಅದೇ ಕಾರಣಕ್ಕೆ ಲೈಂಗಿಕ ಸಂಪರ್ಕ ನಡೆಸಿದೆ.
ನಮ್ಮಿಬ್ಬರ ಲೈಂಗಿಕ ಸಂಪರ್ಕದ ವಿಡಿಯೋವನ್ನು ಯಾರು ಚಿತ್ರೀಕರಣ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಕಾಣದ ಕೈಗಳು ಷಡ್ಯಂತ್ರ ರೂಪಿಸಿ, ಹನಿಟ್ರ್ಯಾಪ್ಗೆ ಬೀಳಿಸಿದ್ದಾರೆ. ಕೋಟ್ಯಂತರ ರೂಪಾಯಿ ಹಣಕ್ಕೂ ಕೆಲವರು ಬ್ಲ್ಯಾಕ್ಮೇಲ್ ಮಾಡಿದ್ದಾರೆ. ನನ್ನ ಹೆಸರಿಗೆ ಕಳಂಕ ತಂದು ರಾಜಕೀಯವಾಗಿ ಮುಗಿಸುವ ಉದ್ದೇಶ ಇದರ ಹಿಂದಿದೆ. ಇದಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿರುವ ಮಾಹಿತಿಯೂ ಇದೆ. ಸಹಮತದ ಲೈಂಗಿಕ ಸಂಪರ್ಕವನ್ನೇ ಅತ್ಯಾಚಾರವೆಂದು ಬಿಂಬಿಸಿ ನನ್ನನ್ನು ಆರೋಪಿಯನ್ನಾಗಿ ಮಾಡಲು ಹೊರಟಿರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕ ಎಂದು ರಮೇಶ ಜಾರಕಿಹೊಳಿ ಹೇಳಿರುವುದಾಗಿ ಎಸ್ಐಟಿ ಮೂಲಗಳು ತಿಳಿಸಿವೆ.
Former Karnataka Water Resources Minister Ramesh Jarkiholi alleged that the Sex video is a part of a “political conspiracy” against him has now confessed that he was the one who was seen in the video and it was a Mutual sex agreed by both.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm