ಬ್ರೇಕಿಂಗ್ ನ್ಯೂಸ್
25-05-21 02:38 pm Bangalore Correspondent ಕರ್ನಾಟಕ
ಬೆಂಗಳೂರು, ಮೇ 25 : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಸಿಡಿಯಲ್ಲಿರೋದು ನಾನೇ.. ಯುವತಿಯ ಜೊತೆ ಸಹಮತದಿಂದಲೇ ಲೈಂಗಿಕ ಸಂಪರ್ಕ ನಡೆಸಿದ್ದೆ ಎಂದು ಹೇಳುವ ಮೂಲಕ ಜಾರಕಿಹೊಳಿ ಇಡೀ ಪ್ರಕರಣಕ್ಕೆ ಮತ್ತೊಂದು ತಿರುವು ನೀಡಿದ್ದಾರೆ.
ಕೆಲಸದ ಆಮಿಷವೊಡ್ಡಿ ಸಚಿವರು ನನ್ನ ಮೇಲೆ ಅತ್ಯಾಚಾರ ಎಸಗಿದ್ದರು ಎಂದು ಸಂತ್ರಸ್ತೆಯ ದೂರಿನಂತೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖಾಧಿಕಾರಿ ಆಗಿರುವ ಎಂ.ಸಿ.ಕವಿತಾ ಎದುರು ವಿಚಾರಣೆಗೆ ಹಾಜರಾಗಿದ್ದ ರಮೇಶ ಜಾರಕಿಹೊಳಿ, ನಾಲ್ಕು ಪುಟಗಳ ಹೇಳಿಕೆ ನೀಡಿದ್ದಾರೆ. ವೈದ್ಯಕೀಯ ಪರೀಕ್ಷೆಗೂ ಒಳಪಟ್ಟಿದ್ದಾರೆ.
ನೀರಾವರಿ ಸಚಿವನಾಗಿದ್ದ ಸಂದರ್ಭದಲ್ಲಿ ಜಲಾಶಯಗಳ ವಿಡಿಯೊ ಚಿತ್ರೀಕರಣ ಮಾಡಲೆಂದು ಯುವತಿಯೇ ನನ್ನನ್ನು ಸಂಪರ್ಕಿಸಿದ್ದಳು. ನನ್ನ ಮೊಬೈಲ್ ನಂಬರ್ ಪಡೆದು ಮಾತನಾಡಲಾರಂಭಿಸಿದ್ದಳು. ಉತ್ತರ ಕರ್ನಾಟಕದವಳು ಎಂದು ಹೇಳಿದ್ದಕ್ಕೆ ನಾನೂ ಮಾತನಾಡುತ್ತಿದ್ದೆ ಎಂದು ರಮೇಶ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ಪ್ರತಿ ಬಾರಿ ಕರೆ ಮಾಡಿದಾಗಲೂ ಯುವತಿ ಲೈಂಗಿಕ ವಿಚಾರದಲ್ಲಿ ಪ್ರಚೋದಿಸುತ್ತಿದ್ದಳು. ಆಕೆಯ ಮಾತಿನಿಂದ ಪ್ರಭಾವಿತನಾಗಿ ಸಲುಗೆಯಿಂದ ಮಾತನಾಡುತ್ತಿದ್ದೆ. ಕೆಲವೊಮ್ಮೆ ಯುವತಿಯೇ ನಗ್ನವಾಗಿ ವಿಡಿಯೋ ಕರೆ ಮಾಡಿ ಅಂಗಾಂಗ ತೋರಿಸುತ್ತಿದ್ದಳು. ಅದರಿಂದಲೂ ನಾನು ಪ್ರಚೋದನೆಗೊಂಡಿದ್ದೆ. ಬಳಿಕ ನನ್ನನ್ನು ಭೇಟಿಯಾಗಬೇಕೆಂದು ಮಲ್ಲೇಶ್ವರದಲ್ಲಿರುವ ಅಪಾರ್ಟ್ಮೆಂಟ್ ಸಮುಚ್ಚಯದ ಫ್ಲ್ಯಾಟ್ಗೆ ಬಂದಿದ್ದಳು. ಅದೇ ಸಂದರ್ಭದಲ್ಲಿ ಆಕೆಯೇ ನನ್ನ ಜೊತೆಗೆ ಲೈಂಗಿಕ ಸಂಪರ್ಕ ನಡೆಸಲು ಒಪ್ಪಿದ್ದಳು. ಅದೇ ಕಾರಣಕ್ಕೆ ಲೈಂಗಿಕ ಸಂಪರ್ಕ ನಡೆಸಿದೆ.
ನಮ್ಮಿಬ್ಬರ ಲೈಂಗಿಕ ಸಂಪರ್ಕದ ವಿಡಿಯೋವನ್ನು ಯಾರು ಚಿತ್ರೀಕರಣ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಕಾಣದ ಕೈಗಳು ಷಡ್ಯಂತ್ರ ರೂಪಿಸಿ, ಹನಿಟ್ರ್ಯಾಪ್ಗೆ ಬೀಳಿಸಿದ್ದಾರೆ. ಕೋಟ್ಯಂತರ ರೂಪಾಯಿ ಹಣಕ್ಕೂ ಕೆಲವರು ಬ್ಲ್ಯಾಕ್ಮೇಲ್ ಮಾಡಿದ್ದಾರೆ. ನನ್ನ ಹೆಸರಿಗೆ ಕಳಂಕ ತಂದು ರಾಜಕೀಯವಾಗಿ ಮುಗಿಸುವ ಉದ್ದೇಶ ಇದರ ಹಿಂದಿದೆ. ಇದಕ್ಕಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿರುವ ಮಾಹಿತಿಯೂ ಇದೆ. ಸಹಮತದ ಲೈಂಗಿಕ ಸಂಪರ್ಕವನ್ನೇ ಅತ್ಯಾಚಾರವೆಂದು ಬಿಂಬಿಸಿ ನನ್ನನ್ನು ಆರೋಪಿಯನ್ನಾಗಿ ಮಾಡಲು ಹೊರಟಿರುವವರನ್ನು ಪತ್ತೆ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕ ಎಂದು ರಮೇಶ ಜಾರಕಿಹೊಳಿ ಹೇಳಿರುವುದಾಗಿ ಎಸ್ಐಟಿ ಮೂಲಗಳು ತಿಳಿಸಿವೆ.
Former Karnataka Water Resources Minister Ramesh Jarkiholi alleged that the Sex video is a part of a “political conspiracy” against him has now confessed that he was the one who was seen in the video and it was a Mutual sex agreed by both.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm