ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm