ಬ್ರೇಕಿಂಗ್ ನ್ಯೂಸ್
26-05-21 01:30 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಮೇ 26 : ಇತ್ತೀಚೆಗೆ ಕಾಡು ಪ್ರಾಣಿಗಳು ನಾಡಿನತ್ತ ಧಾವಿಸುತ್ತಿದ್ದು, ಅವುಗಳು ಪ್ರಾಣಾಪಾಯಕ್ಕೆ ಸಿಲುಕಿದ ಅದಷ್ಟೋ ಸನ್ನಿವೇಶವನ್ನು ನಾವು ಓದಿದ್ದೇವೆ. ಆದರೆ ಸಾಮಾನ್ಯವಾಗಿ ಹಾವುಗಳು ನಾಡಿನಲ್ಲಿಯೂ ಆಗಾಗ ಕಾಣಸಿಗುತ್ತಿರುತ್ತದೆ. ಇದೇ ರೀತಿ ಸನ್ನಿವೇಶ ಇಂದು ಕೂಡ ನಡೆದಿದ್ದು, ಜಮೀನು ಸ್ವಚ್ಛಗೊಳಿಸುವ ವೇಳೆ ನಾಗರಹಾವಿನ ಮರಿಗಳು ಮತ್ತು ಮೊಟ್ಟೆಗಳು ಪತ್ತೆಯಾದ ಘಟನೆ ಚಿತ್ರದುರ್ಗ ಜಿಲ್ಲೆಯ ಓಬಳಾಪುರದಲ್ಲಿ ನಡೆದಿದೆ.
ಆರ್.ಕೆ.ಸ್ವಾಮಿ ಎಂಬುವರು ಜೆಸಿಬಿಯಿಂದ ಜಮೀನು ಸ್ವಚ್ಛಗೊಳಿಸುತ್ತಿದ್ದು, ಭೂಮಿಯನ್ನು ಸಮತಟ್ಟು ಮಾಡುವ ಸಂದರ್ಭದಲ್ಲಿ ಮಣ್ಣಿನಡಿ ಹಾವಿನ ಮರಿ ಮತ್ತು ಮೊಟ್ಟೆಗಳು ಕಂಡು ಬಂದಿವೆ.
ಕೂಡಲೇ ಈ ವಿಷಯದ ಬಗ್ಗೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಉರಗ ತಜ್ಞರಿಗೆ ಮಾಹಿತಿ ನೀಡಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಉರಗ ತಜ್ಞ ಶಿವು ಸ್ಥಳಕ್ಕೆ ಆಗಮಿಸಿದ್ದು, ನಾಗರಹಾವಿನ 21ಮರಿಗಳು ಮತ್ತು 25ಕ್ಕೂ ಹೆಚ್ಚು ಮೊಟ್ಟೆಗಳನ್ನು ಸಂರಕ್ಷಿಸಿದ್ದಾರೆ. ಬಳಿಕ ಅದೇ ಜಮೀನಿನಲ್ಲಿದ್ದ ಎರಡು ನಾಗರಹಾವುಗಳನ್ನು ಸಹ ಸೆರೆ ಹಿಡಿದಿದ್ದಾರೆ.
ಸದ್ಯ ಹಾವುಗಳು ಮತ್ತು ಮೊಟ್ಟೆಗಳನ್ನು ಸಂರಕ್ಷಿಸಿಡಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸಿ ನಾಗರಹಾವು, ಮರಿ ಮತ್ತು ಮೊಟ್ಟೆ ಕಾಡಿಗೆ ಸ್ಥಳಾಂತರಿಸುವ ಬಗ್ಗೆ ನಿರ್ಧರಿಸಿದ್ದಾರೆ. ಚಿತ್ರದುರ್ಗ ಬಳಿಯ ಜೋಗಿಮಟ್ಟಿ ಅರಣ್ಯದ ಒಂದು ಭಾಗದಲ್ಲಿ ಹಾವುಗಳು ಮತ್ತು ಮೊಟ್ಟೆಗಳನ್ನು ಒಟ್ಟಿಗೆ ಬಿಡುವ ಬಗ್ಗೆ ಚಿಂತನೆ ನಡೆದಿದ್ದು, ಈ ಬಗ್ಗೆ ಅಧಿಕಾರಿಗಳು ಖಚಿತ ತೀರ್ಮಾನ ಕೈಗೊಳ್ಳಲಿದ್ದಾರೆ.
Chitradurga 25 Snake Cobra eggs and 21 little snakes rescued. The forest officials are now planning to place them back to forest.
20-06-26 06:40 pm
HK News Staffer
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
20-06-26 10:25 pm
HK News Staffer
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm