ಬ್ರೇಕಿಂಗ್ ನ್ಯೂಸ್
28-05-21 01:23 pm Headline Karnataka News Network ಕರ್ನಾಟಕ
ಶಿವಮೊಗ್ಗ, ಮೇ 28: ಕೊರೊನಾ ಪರಿಸ್ಥಿತಿ ನಿರ್ವಹಣೆಗೆ ಕುವೈತ್ ದೇಶದಿಂದ ಶಿವಮೊಗ್ಗಕ್ಕೆ 20 ಟನ್ ಆಕ್ಸಿಜನ್ ಸರಬರಾಜಾಗಿದೆ. ಮಂಗಳೂರಿನಿಂದ ಬಂದಿದ್ದ ಆಕ್ಸಿಜನ್ ಟ್ಯಾಂಕರನ್ನು ಶಿವಮೊಗ್ಗದ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿಡಲಾಗಿದೆ.
ಕುವೈತ್ ದೇಶದಿಂದ ಹಡಗು ಮೂಲಕ ಆಕ್ಸಿಜನ್ ಕಂಟೈನರ್ಗಳು ಮಂಗಳೂರು ಬಂದರಿಗೆ ತಲುಪಿದ್ದವು. ಈ ಪೈಕಿ 20 ಟನ್ ಕಂಟೈನರ್ ಒಂದು ಶಿವಮೊಗ್ಗಕ್ಕೆ ಬಂದಿದೆ. ಕೇಂದ್ರ ಸರ್ಕಾರದ ಹಂಚಿಕೆಯಂತೆ ಮೆಡಿಕಲ್ ಆಕ್ಸಿಜನ್ ಪೂರೈಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುವೈತ್ ದೇಶದಿಂದ ಬಂದಿರುವ ಆಕ್ಸಿಜನ್ನ್ನು ಶಿವಮೊಗ್ಗದ ಮಾಚೇನಹಳ್ಳಿಯಲ್ಲಿ ಇರುವ ಖಾಸಗಿ ಸಂಸ್ಥೆಯಲ್ಲಿ ಸಂಗ್ರಹಿಸಿ ಇಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಪರ ಜಿಲ್ಲಾಧಿಕಾರಿ ಹಾಗೂ ಆಕ್ಸಿಜನ್ ನಿರ್ವಹಣೆ ವ್ಯವಸ್ಥೆಯ ನೋಡಲ್ ಅಧಿಕಾರಿ ಜಿ.ಅನುರಾಧ, "ಸದ್ಯ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಆಕ್ಸಿಜನ್ ಸಂಗ್ರಹಕ್ಕೆ ವ್ಯವಸ್ಥೆ ಇರದ ಕಾರಣ, ಜಿಲ್ಲೆಯಲ್ಲಿ ಎರಡು ಖಾಸಗಿ ಸಂಸ್ಥೆಗಳಲ್ಲಿ ಆಕ್ಸಿಜನ್ ಸಂಗ್ರಹ ಮಾಡಲಾಗುತ್ತಿದೆ. ಕುವೈತ್ನಿಂದ ಬಂದ ಆಕ್ಸಿಜನ್ನ್ನು ಖಾಸಗಿ ಸಂಸ್ಥೆಯಲ್ಲಿ ಸದ್ಯಕ್ಕೆ ಸಂಗ್ರಹಿಸಲಾಗಿದೆ'' ಎಂದರು.
ಸರ್ಕಾರಿ ಆಸ್ಪತ್ರೆಗೆ ಉಚಿತ ಆಕ್ಸಿಜನ್;
ಮೆಗ್ಗಾನ್ ಆಸ್ಪತ್ರೆಯಲ್ಲಿ 19 ಕೆಎಲ್ ಆಕ್ಸಿಜನ್ ಉತ್ಪಾದನೆಯಾಗುತ್ತಿದ್ದು, ಇದನ್ನು ಮೆಗ್ಗಾನ್ ಆಸ್ಪತ್ರೆಗೆ ಬಳಕೆ ಮಾಡಲಾಗುತ್ತಿದೆ. ಇನ್ನು, ವಿಐಎಸ್ಎಲ್ನಲ್ಲಿ ಉತ್ಪಾದನೆ ಆಗುತ್ತಿರುವುದನ್ನು ಜಂಬೋ ಸಿಲಿಂಡರ್ಗಳಲ್ಲಿ ಫಿಲ್ಲಿಂಗ್ ಮಾಡಿ, ಜಿಲ್ಲೆಯ ವಿವಿಧ ಆಸ್ಪತ್ರೆಗೆ ರವಾನಿಸಲಾಗುತ್ತಿದೆ ಎಂದರು.
ಈಗ ಬಂದಿರುವ ಆಕ್ಸಿಜನ್ ಸರ್ಕಾರಿ ಆಸ್ಪತ್ರೆಗೆ ಉಚಿತವಾಗಿ ನೀಡಲಾಗುತ್ತದೆ. ಖಾಸಗಿ ಆಸ್ಪತ್ರೆಗಳು ಬೇಡಿಕೆ ಸಲ್ಲಿಸಿದರೆ ನಿಗದಿತ ಹಣ ಪಡೆದು ಅವುಗಳಿಗೆ ಆಕ್ಸಿಜನ್ ಪೂರೈಕೆ ಮಾಡಲಾಗುತ್ತದೆ.
ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ;
ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ತಗ್ಗುತ್ತಿವೆ. ಅಕ್ಸಿಜನ್ ಬಳಕೆ ಪ್ರಮಾಣವೂ ಇಳಿಕೆಯಾಗುತ್ತಿದೆ. ಆದರೆ ಮುನ್ನೆಚ್ಚರಿಕಾ ಕ್ರಮವಾಗಿ ಹೆಚ್ಚುವರಿ ಆಕ್ಸಿಜನ್ ಸಂಗ್ರಹ ಮಾಡಿಟ್ಟುಕೊಳ್ಳುವುದು ಆಡಳಿತಕ್ಕೆ ಅನಿವಾರ್ಯವಾಗಿದೆ ಎಂದು ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಹೇಳಿದ್ದಾರೆ.
Read: ಕುವೈಟ್ ಭಾರತೀಯ ನಿವಾಸಿಗಳಿಂದ ಭಾರೀ ಪ್ರಮಾಣದ ನೆರವು ; 252 ಮೆಟ್ರಿಕ್ ಟನ್ ಆಕ್ಸಿಜನ್ ಮಂಗಳೂರಿಗೆ
The truck carrying an oxygen cryogenic container from Mangaluru reaches Shivamogga. The medical oxygen was donated by the government of the Kingdom of Kuwait to India.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:00 am
HK News Desk
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
Masood Azhar: ಜೈಶ್ ಮೊಹಮ್ಮದ್ ಉಗ್ರರ ನೆಲೆ ಧ್ವಂಸ...
07-05-25 10:45 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm