ಬ್ರೇಕಿಂಗ್ ನ್ಯೂಸ್
29-05-21 09:45 pm Satish, Bengaluru Correspondent ಕರ್ನಾಟಕ
ಬೆಂಗಳೂರು, ಮೇ 29: ಕೊರೊನಾದಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗಾಗಿ ರಾಜ್ಯ ಸರಕಾರ ಬಾಲ ಸೇವಾ ಯೋಜನೆ ಎಂಬ ವಿಶಿಷ್ಟ ಯೋಜನೆ ಘೋಷಿಸಿದೆ. ಈ ಯೋಜನೆ ಅಡಿಯಲ್ಲಿ ಮಕ್ಕಳ ರಕ್ಷಕರಿಗೆ ತಿಂಗಳಿಗೆ 3,500 ರೂ. ನೆರವು ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಒಂದೊಮ್ಮೆ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ರಕ್ಷಕರು ಇರದೇ ಇದ್ದಲ್ಲಿ ಅವರನ್ನು ಮಕ್ಕಳ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಈ ಮಕ್ಕಳಿಗೆ ಗುಣಮುಟ್ಟದ ಶಿಕ್ಷಣ ಸಿಗುವಂತೆ ಮಾಡಲು ಮಾದರಿ ರೆಸಿಡೆನ್ಸಿಯನ್ ಶಾಲೆಗಳಿಗೆ ದಾಖಲಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.
10ನೇ ತರಗತಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕಾಗಿ ಉಚಿತ ಲ್ಯಾಪ್ಟಾಪ್ ಅಥವಾ ಟ್ಯಾಬ್ ನೀಡಲಾಗುವುದು. 21 ವರ್ಷ ಪೂರ್ಣಗೊಳಿಸಿದ ಯುವತಿಯರಿಗೆ ಮದುವೆ, ಉನ್ನತ ಶಿಕ್ಷಣ ಹಾಗೂ ಸ್ವ ಉದ್ಯೋಗಕ್ಕಾಗಿ 1 ಲಕ್ಷ ರೂಪಾಯಿ ನೆರವು ನೀಡಲಾಗುವುದು ಎಂದು ಸಿಎಂ ಮಾಹಿತಿ ನೀಡಿದ್ದಾರೆ.
ಮಗುವಿನ ಪರಿಪೂರ್ಣ ವಿಕಾಸಕ್ಕಾಗಿ ಅಗತ್ಯ ಮಾರ್ಗದರ್ಶನ ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಈ ಮೂಲಕ ಇತರ ರಾಜ್ಯಗಳಲ್ಲಿ ಪಾಲಕರನ್ನು ಕಳೆದುಕೊಂಡ ಮಕ್ಕಳಿಗೆ ನೀಡಲಾಗುತ್ತಿರುವ ನೆರವಿನ ಮಾದರಿಯಲ್ಲಿಯೇ ರಾಜ್ಯ ಸರಕಾರವೂ ನೆರವು ಘೋಷಿಸಿದೆ.
The Karnataka government will provide monetary support to children who have lost both parents owing to the Covid-19 pandemic, Chief Minister B S Yediyurappa said Saturday.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am