ಬ್ರೇಕಿಂಗ್ ನ್ಯೂಸ್
30-05-21 01:24 pm Satish, Bengaluru ಕರ್ನಾಟಕ
ಬೆಂಗಳೂರು, ಮೇ 29: ಕೋವಿಡ್ 19 ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಕಠಿಣ ಲಾಕ್ ಡೌನ್ ನಿಯಮ ಜಾರಿಗೊಳಿಸಲಾಗಿದೆ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೀದಿಗೆ ಇಳಿದವರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಿದ ಪೊಲೀಸರು ಬರೋಬ್ಬರಿ 35905 ಸಾವಿರ ವಾಹನ ಜಪ್ತಿ ಮಾಡಿದ್ದಾರೆ. ಅದರಲ್ಲೂ 32 ಸಾವಿರ ದ್ವಿಚಕ್ರ ವಾಹನ. ಇವುಗಳಿಂದ ಸರಾಸರಿ ದಂಡ ಎಷ್ಟು ಸಂಗ್ರಹವಾಗುತ್ತದೆ. ಈ ದಂಡದ ಮೊತ್ತವನ್ನು ಏನು ಮಾಡುತ್ತಾರೆ ಎಂಬುದರ ಪೂರ್ಣ ವಿವರ ಇಲ್ಲಿದೆ ನೋಡಿ!
25 ಕೋಟಿ ಸಂಗ್ರಹವಾಗುವ ದಂಡದ ಮೊತ್ತ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಸರ್ಕಾರ ಕೂಡ ಕಠಿಣ ಲಾಕ್ ಡೌನ್ ನಿಯಮ ಜಾರಿಗೊಳಿಸಿತು. ಸಾಮಾಜಿಕ ಅಂತರ ಕಾಪಾಡದ, ಮಾಸ್ಕ್ ಧರಿಸದವರ ವಿರುದ್ಧ ದಂಡಾಸ್ತ್ರ ಪ್ರಯೋಗಿಸಲು ಪೊಲೀಸರಿಗೆ ಸೂಚಿಸಲಾಗಿತ್ತು. ಇನ್ನು ಬೇಕಾಬಿಟ್ಟಿ ರಸ್ತೆಗೆ ಇಳಿಯುವರ ವಾಹನ ಜಪ್ತಿ ಮಾಡಲು ಸೂಚಿಸಲಾಗಿತ್ತು. ಆರಂಭದಲ್ಲಿ ಪೊಲೀಸರು ಲಾಠಿ ಏಟಿನ ಮೂಲಕ ಬುದ್ಧಿ ಹೇಳಲು ಪ್ರಯತ್ನಿಸಿದ್ದರು. ಇದಕ್ಕೆ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ದಂಡಾಸ್ತ್ರ ಪ್ರಯೋಗ ಮಾಡಿದ್ದಾರೆ. ಬೆಂಗಳೂರು ಪೊಲೀಸರು ಕಳೆದ ಒಂದು ತಿಂಗಳಿನಲ್ಲಿ ದಾಖಲಿಸಿರುವ ಪ್ರಕರಣಗಳಿಂದ ಸಂಗ್ರಹವಾಗುವ ದಂಡದ ಮೊತ್ತ ಸರಾಸರಿ 25 ಕೋಟಿ ರೂಪಾಯಿಗೂ ಅಧಿಕವಾಗಲಿದೆ ಎಂದು ಅಂದಾಜಿಸಲಾಗಿದೆ.
35 ಸಾವಿರ ವಾಹನ ಜಪ್ತಿ
ರಾಜಧಾನಿಯಲ್ಲಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆ ವರೆಗೂ ಅಗತ್ಯ ವಸ್ತುಗಳ ಖರೀದಿ ಹಾಗೂ ಜನರ ಓಡಾಟಕ್ಕೆ ಬೆಂಗಳೂರಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಅನಾವಶ್ಯಕ ಓಡಾಟಕ್ಕೆ ಅವಕಾಶ ನೀಡಿಲ್ಲ. ಆದರೆ ಬೆಂಗಳೂರಿನಲ್ಲಿ ಜನರು ಅನಾವಶ್ಯಕ ಓಡಾಟ ಮಾಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ 32,203 ದ್ವಿಚಕ್ರ ವಾಹನಗಳನ್ನು ಬೆಂಗಳೂರು ಪೊಲೀಸರು ಜಪ್ತಿ ಮಾಡಿದ್ದಾರೆ. ಅದರಂತೆ 1678 ಆಟೋಗಳು, ನಾಲ್ಕು ಚಕ್ರದ 2024 ವಾಹನಗಳನ್ನು ಜಪ್ತಿ ಮಾಡಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಒಟ್ಟಾರೆ 35,905 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಈ ಎಲ್ಲಾ ವಾಹನಗಳಿಗೆ ನ್ಯಾಯಾಧೀಶರು ದಂಡ ವಿಧಿಸಲಿದ್ದು, ದಂಡದ ಮೊತ್ತವನ್ನು ಪಾವತಿಸಿ ವಾಹನ ಪಡೆಯಬೇಕು. ಪ್ರತಿ ವಾಹನಕ್ಕೆ ಸರಾಸರಿ 5 ಸಾವಿರ ದಂಡ ವಿಧಿಸಿದರೂ ಜಪ್ತಿಯಾದ ವಾಹನಗಳ ಬಿಡುಗಡೆಯಿಂದಲೇ ಬೆಂಗಳೂರು ಪೊಲೀಸರ ಖಜಾನೆಗೆ 17 ಕೋಟಿ ರೂ. ತುಂಬಲಿದೆ. ಗೃಹ ಸಚಿವರು ಹೇಳುವ ಪ್ರಕಾರ ಇನ್ನೂ ಒಂದು ತಿಂಗಳು ಲಾಕ್ ಡೌನ್ ವಿಸ್ತರಣೆ ಮಾಡುವ ಸುಳಿವು ನೀಡಿದ್ದಾರೆ. ಆಗೇನಾದರೂ ಆದರೆ, ಬರೋಬ್ಬರಿ ಪೊಲೀಸರು ಜಪ್ತಿ ಮಾಡುವ ವಾಹನ ಹಾಗೂ ವಿಧಿಸುವ ದಂಡದ ಮೊತ್ತ 50 ಕೋಟಿ ರೂ. ಆದರೂ ಅಚ್ಚರಿ ಪಡಬೇಕಿಲ್ಲ.
35,000 motor vehicles were seized for violation of lockdown norms in Bengaluru and the Bengaluru traffic police have collected a fine of 25 crores in which the Home Minister himself was shocked.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
08-05-25 10:54 pm
Mangalore Correspondent
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
MLA Harish Poonja, High Court: ಮುಸ್ಲಿಮರ ಬಗ್ಗೆ...
07-05-25 10:30 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm