ಬ್ರೇಕಿಂಗ್ ನ್ಯೂಸ್
31-05-21 12:18 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 31: ಮುಂದಿನ ಐದು ದಿನಗಳ ಕಾಲ ಕೇರಳ ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 2 ರಿಂದ 4ರವರೆಗೆ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅಧಿಕ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ಒಂದೆರೆಡು ವಾರಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಇಂದು ಕೇರಳಕ್ಕೆ ಪ್ರವೇಶಿಸಬೇಕಿದ್ದು ಮುಂಗಾರು ಮೂರು ದಿನ ತಡವಾಗಿ ಆಗಮಿಸಲಿದೆ.


ಜೂನ್ 3ರಿಂದ ಕೇರಳದಲ್ಲಿ ಮುಂಗಾರಿನ ಪ್ರವೇಶವಾಗಲಿದೆ. ಇದರ ಪರಿಣಾಮವಾಗಿ ನಾಳೆಯಿಂದ (ಜೂನ್ 1) ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇಂದಿನಿಂದ 5 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ;
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 1ರಿಂದ ರಾಜ್ಯದಲ್ಲಿ ಮಳೆ;
ಇಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎನ್ನಲಾಗಿತ್ತು. ಆದರೆ, ಜೂನ್ 3ರಿಂದ ಕೇರಳದಲ್ಲಿ ಮುಂಗಾರು ಮಳೆಯಾಗಲಿದೆ. ಜೂನ್ 1ರಿಂದ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 3 ಅಥವಾ 4ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ. ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್ನಿಂದ ಸೆಪ್ಟೆಂಬರ್ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ. ಜೂನ್ ಮೊದಲ ವಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
The India Meteorological Department (IMD) said on Sunday that the southwest monsoon will most probably hit Kerala on Monday. The conditions will become favourable for onset of the monsoon over southern tip of Kerala on May 31, the IMD's said in its forecast.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm