ಬ್ರೇಕಿಂಗ್ ನ್ಯೂಸ್
31-05-21 12:18 pm Headline Karnataka News Network ಕರ್ನಾಟಕ
ಬೆಂಗಳೂರು, ಮೇ 31: ಮುಂದಿನ ಐದು ದಿನಗಳ ಕಾಲ ಕೇರಳ ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 2 ರಿಂದ 4ರವರೆಗೆ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಅಧಿಕ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಕಳೆದ ಒಂದೆರೆಡು ವಾರಗಳಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಇಂದು ಕೇರಳಕ್ಕೆ ಪ್ರವೇಶಿಸಬೇಕಿದ್ದು ಮುಂಗಾರು ಮೂರು ದಿನ ತಡವಾಗಿ ಆಗಮಿಸಲಿದೆ.


ಜೂನ್ 3ರಿಂದ ಕೇರಳದಲ್ಲಿ ಮುಂಗಾರಿನ ಪ್ರವೇಶವಾಗಲಿದೆ. ಇದರ ಪರಿಣಾಮವಾಗಿ ನಾಳೆಯಿಂದ (ಜೂನ್ 1) ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.ಇಂದಿನಿಂದ 5 ದಿನಗಳವರೆಗೆ ಕೇರಳ ಮತ್ತು ಮಾಹೆ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ, 21 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆ;
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆಯಿಂದ ಮೂರು ದಿನ ಭಾರೀ ಮಳೆಯಾಗಲಿದೆ. ಇಂದಿನಿಂದ ಕೇರಳ, ಅಸ್ಸಾಂ, ಮೇಘಾಲಯ, ಆಂಧ್ರಪ್ರದೇಶದ ಕರಾವಳಿ ಪ್ರದೇಶ, ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ಇಂದು ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 1ರಿಂದ ರಾಜ್ಯದಲ್ಲಿ ಮಳೆ;
ಇಂದು ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎನ್ನಲಾಗಿತ್ತು. ಆದರೆ, ಜೂನ್ 3ರಿಂದ ಕೇರಳದಲ್ಲಿ ಮುಂಗಾರು ಮಳೆಯಾಗಲಿದೆ. ಜೂನ್ 1ರಿಂದ ಕರ್ನಾಟಕದಲ್ಲಿಯೂ ಭಾರೀ ಮಳೆಯಾಗಲಿದೆ. ರಾಜ್ಯದಲ್ಲಿ ಜೂನ್ ಮೊದಲ ವಾರದಲ್ಲಿ ಮುಂಗಾರು ಪ್ರವೇಶವಾಗಲಿದ್ದು, ಮಳೆಗಾಲ ಶುರುವಾಗಲಿದೆ ಎಂದು ಕರ್ನಾಟಕ ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 3 ಅಥವಾ 4ರಂದು ಕರ್ನಾಟಕದಲ್ಲಿ ಮುಂಗಾರು ಮಳೆಯಾಗಲಿದೆ ಎನ್ನಲಾಗಿದೆ. ಒಂದು ಬಾರಿ ಮುಂಗಾರು ಆರಂಭವಾದ ನಂತರ ಅದರ ಪರಿಣಾಮ ಯಾವ ರೀತಿ ಇರಬಹುದು ಎಂದು ನಾವು ಅಂದಾಜಿಸಬಹುದು. ಜೂನ್ನಿಂದ ಸೆಪ್ಟೆಂಬರ್ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ. ಜೂನ್ ಮೊದಲ ವಾರದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
The India Meteorological Department (IMD) said on Sunday that the southwest monsoon will most probably hit Kerala on Monday. The conditions will become favourable for onset of the monsoon over southern tip of Kerala on May 31, the IMD's said in its forecast.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm