ಬ್ರೇಕಿಂಗ್ ನ್ಯೂಸ್
31-05-21 01:26 pm Headline Karnataka News Network ಕರ್ನಾಟಕ
ಮೈಸೂರು, ಮೇ 31: ಕೊರೊನಾ ನಿಯಂತ್ರಿಸಲು ಅನಿವಾರ್ಯವಾಗಿ ಸರ್ಕಾರ ಲಾಕ್ಡೌನ್ ವಿಧಿಸಿದೆ. ಈ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಆದರೆ ಜನರು ಹಲವು ಕಾರಣಕ್ಕೆ ಒಂದಲ್ಲ ಒಂದು ರೀತಿಯಲ್ಲಿ ಪರದಾಡುತ್ತಿದ್ದಾರೆ. ಬಸ್ಗಳಿಲ್ಲದೆ ಅಗತ್ಯವಿರುವ ವಸ್ತುಗಳನ್ನು ತರಲು ಹರಸಾಹಸ ಪಡಬೇಕಾಗಿದೆ.
ತನ್ನ ಮಗನಿಗೆ ಔಷಧಿ ತರಲು ಸುಮಾರು 280 ಕಿಲೋಮೀಟರ್ ವರೆಗೆ ಅಪ್ಪ ಸೈಕಲ್ ತುಳಿದಿದ್ದಾರೆ. ಈ ಮನ ಕಲಕುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಗಾರೆ ಕೆಲಸ ಮಾಡುತ್ತಿರುವ ಜಿಲ್ಲೆಯ ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ನಿವಾಸಿ ಆನಂದ್ ಎಂಬುವವರು ತನ್ನ ಮಗನಿಗೆ ಔಷಧಿ ತರಲು ಸೈಕಲ್ನಲ್ಲಿ ಸುಮಾರು 280 ಕಿಲೋಮೀಟರ್ ಹೋಗಿದ್ದಾರೆ. ಮಾನಸಿಕ ವಿಶೇಷ ಚೇತನ ಮಗನಿಗೆ 10 ವರ್ಷಗಳಿಂದ ಮಾತ್ರೆ ಕೊಡಿಸಲಾಗುತ್ತಿದೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಒಮ್ಮೆ ಮಾತ್ರೆ ತಪ್ಪಿದರೆ 18 ವರ್ಷ ಮತ್ತೆ ಮಾತ್ರೆ ನೀಡಬೇಕಾಗುತ್ತದೆ ಎಂಬ ಆತಂಕದಲ್ಲಿ ಸೈಕಲ್ನಲ್ಲಿ ನೂರಾರು ಕಿಲೋಮೀಟರ್ ಹೋಗಿ ಔಷಧಿ ತಂದಿದ್ದಾರೆ.
ಬೈಕ್, ಆಟೋ ಹಾಗೂ ವಾಹನ ಸೌಲಭ್ಯ ಸಿಗದ ಹಿನ್ನೆಲೆ ತಂದೆ ತನ್ನ ಸೈಕಲ್ ತುಳಿದು ಮಗನಿಗೆ ಮಾತ್ರೆ ತಂದುಕೊಟ್ಟಿದ್ದಾರೆ. ಕಳೆದ ಭಾನುವಾರ ಗ್ರಾಮದಿಂದ ತೆರಳಿ ಕನಕಪುರದಲ್ಲಿ ತಂಗಿದ್ದರು. ನಂತರ ಅಲ್ಲಿಂದ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ತಂದಿದ್ದಾರೆ. ಯಾರೂ ಬೈಕ್ ಕೊಡಲಿಲ್ಲ. ಒಂದು ದಿನ ಮಗನಿಗೆ ಮಾತ್ರೆ ತಪ್ಪಿಸಿದರೆ ತೊಂದರೆ ಆಗುತ್ತಿತ್ತು. ಮಗನಿಗೆ ಬೇಕಾದ ಮಾತ್ರೆ ಬೇರೆಲ್ಲೂ ಸಿಗುತ್ತಿರಲಿಲ್ಲ. ಹೀಗಾಗಿ ಸೈಕಲ್ನಲ್ಲಿಯೇ ಹೋಗಿ ಬಂದೆ ಎಂದು ಆನಂದ್ ಹೇಳಿದರು.
Dad goes cycling for 280 kilometers to bring medicine to his son in Mysuru
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am